spot_img
Wednesday, April 1, 2026
spot_img

ಭಟ್ಕಳ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್ಮೆಂಟ್ : 44ನೇ ವಾರ್ಷಿಕೋತ್ಸವ

ಭಟ್ಕಳ: ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್ಮೆಂಟ್ ಭಟ್ಕಳ ಇದರ 44ನೇ ಕಾಲೇಜು ವಾರ್ಷಿಕೋತ್ಸವ ಮತ್ತು 40ನೇ ಪದವಿ ದಿನಾಚರಣೆ ರವಿವಾರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪಾಧ್ಯಕ್ಷರಾದ ಅಂಜುಮನ್, ಮೇಜರ್ ಡಾ. ಮೊಹಮ್ಮದ್ ಜುಬೇರ್ ಕೋಲಾ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಎಂ.ಐ. ಟಿ ಮಣಿಪಾಲದ ಜೈವಿಕ ತಂತ್ರಜ್ಞಾನ ವಿಭಾಗದ ಸಹಾಯಕ ನಿರ್ದೇಶಕ ಹಾಗೂ ಹಿರಿಯ ಪ್ರಾಧ್ಯಾಪಕ ಡಾ.ವಿ ರಾಮಚಂದ್ರ ಮೂರ್ತಿ ಭಾಗವಹಿಸಿದ್ದರು.

ಭಟ್ಕಳ ಎ.ಎಚ್.ಎಂ, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಇಶಾಕ್ ಶಾಬಂದ್ರಿ, ಭಟ್ಕಳ ಎ‌ಐಟಿ‌ಎಂ ಕಾರ್ಯದರ್ಶಿ ಮೊಹಿದ್ದೀನ್ ರುಕ್ನಾದ್ದೀನ್, ಅಬ್ದುಲ್ ಹಸೀಬ್ ಕಾಡ್ಲಿ, ತನ್ವೀರ್ ಕಾಸರಗೋಡ, ಅಂಜುಮನ್ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ. ಕೆ.ಫಜಲುರ್ ರೆಹಮಾನ್,ರಿಜಿಸ್ಟ್ರಾರ್ ಪ್ರೊ.ಜಾಹಿದ್ ಖರೂರಿ, ಡಾ ಅನಂತಮೂರ್ತಿ ಶಾಸ್ತ್ರಿ, ಮಾಧ್ಯಮ ಸಂಹವನಾಧಿಕಾರಿ ಪ್ರೊ.ಸುಬ್ರಹ್ಮಣ್ಯ ಗಜಾನನ ಭಾಗವತ್, ಶ್ರೀ ಶೈಲ ಭಟ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಈ ಕಾಲೇಜು 44 ವರ್ಷಗಳಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಎ.ಐ ಎಂ.ಎಲ್ ಡಾಟಾ ಸೈನ್ಸ್, ರೋಬಿಟಿಕ್ ಸೇರಿದಂತೆ ಹೊಸ ಹೊಸ ಶಾಖೆಗಳಿಂದ ಕಂಗೊಳಿಸುತ್ತಿದೆ. ಅದೇ ರೀತಿ ಪ್ರತಿಷ್ಠಿತ ಕಂಪನಿಗಳನ್ನು ತಮ್ಮತ್ತ ಆಕರ್ಷಿಸುವಂತೆ ಮಾಡಿದ್ದು, ಪ್ಲೇಸ್ ಮೆಂಟ್, ಕ್ಯಾಂಪಸ್ ಸೌಲಭ್ಯ ಹೊಂದಿದ್ದು. ಈ ಕಾಲೇಜು ಜಿಲ್ಲೆಯಲ್ಲಿಯೇ ಉತ್ತಮ ರೀತಿಯಲ್ಲಿ ಮುನ್ನಡೆಯುತ್ತಿದೆ. ಇಂದು ನಡೆದ ಕಾರ್ಯಕ್ರಮದಲ್ಲಿ ಎಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ನೆನಪಿನ ಕಾಣಿಕೆ ನೀಡಿದರು. ಅದೇ ರೀತಿ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೂ ಇದೆ ವೇಳೆ ಬಹುಮಾನ ವಿತರಿಸಿದರು.

ಕಂಪ್ಯೂಟರ್ ಸೈನ್ಸ್ ಮುಖ್ಯಸ್ಥ ಡಾ.ಅನ್ವರ್ ಸಾತಿಕ್. ಜೆ. ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!