spot_img
Sunday, March 15, 2026
spot_img

ರಂಗವು ಒದಗುತ್ತಾ ಹೋದಾಗ ಕಲೆಯು ಪ್ರಬುದ್ಧತೆಗೊಳ್ಳುತ್ತದೆ: ಭಾಗವತ ಹರೀಶ್ ಕಾವಡಿ

ತೆಕ್ಕಟ್ಟೆ: ಸಾಂಸ್ಕೃತಿಕ ಲೋಕದ ಭವಿಷ್ಯದ ರೂವಾರಿಗಳು ತೆಕ್ಕಟ್ಟೆ ಸಂಸ್ಥೆಯಲ್ಲಿ ದಿನದಿನವೂ ವೃದ್ಧಿಗೊಳ್ಳುತ್ತಿದ್ದಾರೆ. ಯಕ್ಷಕಲೆಯಲ್ಲಿನ ವಿವಿಧ ಆಯಾಮಗಳಲ್ಲಿ ಕರಗತಗೊಂಡಿರುವ ಯಶಸ್ವಿ ಸಂಸ್ಥೆಯ ಪುಟಾಣಿಗಳು ಕರಾವಳಿ ಭಾಗದಲ್ಲಿ ಮನೆ ಮಾತಾಗಿದ್ದಾರೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಕಾಣುತ್ತದೆ. ರಂಗ ಒದಗುತ್ತಾ ಹೋದಾಗ ಮಕ್ಕಳಲ್ಲಿನ ಕಲೆ ಪ್ರಬುದ್ಧತೆಗೊಳ್ಳುತ್ತದೆ. ಹಲವಾರು ರಂಗದಲ್ಲಿ ಮಿಂಚುತ್ತಾ ಕಳೆಕಟ್ಟುವ ಮಕ್ಕಳು ಕಲಾ ವಲಯದಲ್ಲಿ ಸೈ ಎನಿಸಿಕೊಂಡಿರುವುದಂತೂ ನಿಜ ಎಂದು ಭಾಗವತ ಹರೀಶ್ ಕಾವಡಿ ಅಭಿಪ್ರಾಯಪಟ್ಟಿದ್ದಾರೆ.

ಮಣೂರು ಮಳಲುತಾಯಿ ಶ್ರೀ ದುರ್ಗಾಪರಮೇಶ್ವರಿ ದೇಗುಲದ ೨ನೇ ವರ್ಷದ ಪ್ರತಿಷ್ಠಾ ವರ್ದಂತಿ ಕಾರ್ಯಕ್ರಮದಲ್ಲಿ ಯಶಸ್ವೀ ಕಲಾವೃಂದ ಕೊಮೆ, ತೆಕ್ಕಟ್ಟೆಯ ಸಿನ್ಸ್ ೧೯೯೯ ಶ್ವೇತಯಾನ ೩೦ನೇಯ ಕಾರ್ಯಕ್ರಮವಾಗಿ ಮಕ್ಕಳ ಯುಗಳ ಸಂವಾದದಲ್ಲಿ ಆಡಳಿತ ಮಂಡಳಿಯ ರಘುರಾಮ ಶೆಟ್ಟಿಯವರನ್ನು ಗೌರವಿಸಿ ಭಾಗವತ ಹರೀಶ್ ಕಾವಡಿ ಮಾತನ್ನಾಡಿದರು.

ಅತಿಥಿಗಳಾಗಿ ವಿಜಯ್ ಶೆಟ್ಟಿ, ಸುರೇಶ್, ಚಂಡೆಯ ರಾಹುಲ್ ಕುಂದರ್ ಕೋಡಿ ಉಪಸ್ಥಿತರಿದ್ದರು. ಲಂಕಾದಹನದ ಹನುಮಂತ-ಲಂಕಿಣಿ, ದ್ರೌಪದಿ ಪ್ರತಾಪದ ದ್ರೌಪದಿ-ಅರ್ಜುನ, ಕೃಷ್ಣಾರ್ಜುನದ ಸುಭದ್ರೆ-ರುಕ್ಮಿಣಿ, ಸುಧನ್ವಾರ್ಜುನದ ಸುಧನ್ವ-ಪ್ರಭಾವತಿ, ಅಭಿಮನ್ಯು-ಸುಭದ್ರೆ, ಭೀಮ-ಅರ್ಜುನರ ಸಂವಾದಗಳು ಯುಗಳ ಸಂವಾದವಾಗಿ ರಂಗ ಪ್ರಸ್ತುತಿಗೊಂಡಿತು. ಉಪನ್ಯಾಸಕ ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!