spot_img
Tuesday, February 18, 2025
spot_img

ಮದರ್ ತೆರೇಸಾ ಶಿಕ್ಷಣ ಸಂಸ್ಥೆ ಶಂಕರನಾರಾಯಣ ದಾಖಲಾತಿ ಸಂಖ್ಯೆ ಹೆಚ್ಚಳ : 4 ಹೊಸ ಶಾಲಾವಾಹನ ಖರೀದಿ

ಕುಂದಾಪುರ : ಮದರ್ ತೆರೇಸಾ ಶಿಕ್ಷಣ ಸಂಸ್ಥೆ ಶಂಕರನಾರಾಯಣ 2024-25ನೇ ಶೈಕ್ಷಣಿಕ ಸಾಲಿನ ದಾಖಲಾತಿಯಲ್ಲಿ ಎಲ್ ಕೆ ಜಿ ಯಿಂದ ಪಿ.ಯು.ಸಿ ವರೆಗಿನ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗಿರುವುದರಿಂದ ಸಿದ್ದಾಪುರ ಊರಿನ ಮಕ್ಕಳಿಗಾಗಿ ಬೇರೆ ವಾಹನ ವ್ಯವಸ್ಥೆ ಮಾಡಲಾಗಿದೆ.

ಕಂಡ್ಲೂರು, ಗುಮ್ಮೋಲ, ಬೇಳೂರು ಹಾಗೂ ಕೋಟೇಶ್ವರ ಈ ಮಾರ್ಗಗಳಿಗೆ ಹೊಸದಾಗಿ ವಾಹನ ಸೌಲಭ್ಯ ಒದಗಿಸಲು ಆಡಳಿತ ಮಂಡಳಿ 4 ಹೊಸ ಬಸ್ಸುಗಳನ್ನು ಅಮರಜ್ಯೋತಿ ಆಟೋಮೋಬೈಲ್ಸ್ ಪಡೀಲ್ ಮಂಗಳೂರು ವಿತರಕರಿಂದ ಖರೀದಿಸಿದೆ. ಜನರಲ್ ಮ್ಯಾನೇಜರ್ ರಾನ್ಸನ್ ಮಚಾಡೊ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ ನ ಆಡಳಿತ ಅಧಿಕಾರಿಗಳಾದ ಕುಮಾರಿ ರೆನಿಟಾ ಲೋಬೊ ಮತ್ತು ಕುಮಾರಿ ಶಮಿತಾ ರಾವ್ ಇವರಿಗೆ ಕೀ ಮತ್ತು ಹೂಗುಚ್ಚ ನೀಡಿ ವಾಹನ ಹಸ್ತಾಂತರಿಸಿದರು.

ಸಂಸ್ಥೆಯ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಆಡಳಿತ ಮಂಡಳಿಯ ಕೊಡುಗೆ ಶ್ಲಾಘನಿಯ ಪ್ರತಿ ಶಾಲಾ ವಾಹನಗಳಲ್ಲಿ ನುರಿತ ವಾಹನ ಚಾಲಕರು ಮತ್ತು ಮಹಿಳಾ ಸೇವಾ ಸಿಬ್ಬಂದಿಗಳ ನೇಮಕಾತಿ ಮಾಡಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!