spot_img
Sunday, February 15, 2026
spot_img

ತ್ರಾಸಿ ಶೋ ರೂಮ್ ನಲ್ಲಿ ಬೆಂಕಿ ಆಕಸ್ಮಿಕ- ಕೋಟ್ಯಂತರ ರೂ. ನಷ್ಟ

ಕುಂದಾಪುರ: ತ್ರಾಸಿಯ ಪ್ರತಿಷ್ಠಿತ ಶೋರೂಮ್‌ನಲ್ಲಿ ತಡರಾತ್ರಿ ಬೆಂಕಿ ಆಕಸ್ಮಿಕ ಸಂಭವಿಸಿದ ಘಟನೆ ಭಾನುವಾರ ನಡೆದಿದೆ.

ತ್ರಾಸಿ ಸಮೀಪದ ಸುಧಾಕರ್ ಶೆಟ್ಟಿ ಮಾಲಕತ್ವದ ಅಂಬಾ ಟಿವಿ ಹಾಗೂ ಹೋಂ ಅಪ್ಲೈಯನ್ಸಸ್ ಶೋರೂಂ ನಲ್ಲಿ ರಾತ್ರಿ ೯:೩೦ ಸುಮಾರಿಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು ಸಂಪೂರ್ಣ ಅಂಗಡಿ ಸುಟ್ಟು ಭಸ್ಮವಾಗಿದೆ. ಸುಮಾರು ಒಂದು ಕೋಟಿ ರೂಪಾಯಿಗೂ ಮಿಕ್ಕಿ ಸ್ವತ್ತುಗಳು ಸುಟ್ಟು ಹೋಗಿದೆ ಎಂದು ಅಂದಾಜಿಸಲಾಗಿದೆ. ಜೊತೆಗೆ ಅಂಗಡಿಯಲ್ಲಿದ್ದ ೩ ಲಕ್ಷ ರೂಪಾಯಿ ನಗದು ಸಂಪೂರ್ಣ ಸುಟ್ಟು ಹೋಗಿದೆ ಎಂದು ತಿಳಿದುಬಂದಿದೆ

ಬೆಂಕಿಯ ಚೆನ್ನಾಗಿ ಆಕಾಶಕ್ಕೆ ಚಾಚುತಿದಂತೆ ಸ್ಥಳೀಯರಿಂದ ಮಾಹಿತಿ ಪಡೆದ ಬೈಂದೂರು ಕುಂದಾಪುರ ಹಾಗೂ ಉಡುಪಿ ಅಗ್ನಿಶಾಮಕ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿತು. ರಾತ್ರಿ ಸುಮಾರು ೩:೦೦ ತನಕ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ತಂಡ ಬೆಂಕಿ ನಂದಿಸುವಲ್ಲಿ ಸಫಲವಾಗಿದೆ ಅಗ್ನಿಶಾಮಕ ತಂಡಕ್ಕೆ ಸ್ಥಳೀಯರು ಸಹಕಾರ ನೀಡಿದರು.

ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!