spot_img
Saturday, February 14, 2026
spot_img

ಸ. ಹಿ. ಪ್ರಾ.ಶಾಲೆ ಬೈಲೂರು ಸಂಸತ್ತ್ ಮಾದರಿ ಚುನಾವಣೆ: EVM App ಮೂಲಕ ಮತ ಚಲಾಯಿಸಿದ ವಿದ್ಯಾರ್ಥಿಗಳು

ಕುಂದಾಪುರ: ಸ. ಹಿ. ಪ್ರಾ.ಶಾಲೆ ಬೈಲೂರು ಇಲ್ಲಿ ಜೂನ್ 08 ರಂದು ಶಾಲಾ ವಿದ್ಯಾರ್ಥಿ ನಾಯಕ ಮತ್ತು ಉಪನಾಯಕನ ಆಯ್ಕೆಗಾಗಿ ಸಂಸತ್ತ್ ಮಾದರಿ ಚುನಾವಣೆಯನ್ನು ನಡೆಸಲಾಯಿತು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಕ್ಕಳಿಗೆ ಚುನಾವಣೆಯ ಅರಿವು ಮೂಡಿಸುವ ಉದ್ದೇಶದಿಂದ ಚುನಾವಣೆ ಅಧಿಸೂಚನೆ, ನಾಮಪತ್ರ ಸಲ್ಲಿಕೆ, ಪರೀಶೀಲನೆ, ಹಿಂಪಡೆಯುವುದು, ಚಿಹ್ನೆ ನೀಡುವಿಕೆ, ಪ್ರಚಾರ ಹೀಗೆ ಎಲ್ಲಾ ಹಂತಗಳ ನಂತರ ಮಕ್ಕಳಿಗೆ EVM App ಮೂಲಕ ಮೊಬೈಲ್ ನಲ್ಲಿ ಮತಚಲಾಯಿಸಲು ಅವಕಾಶ ನೀಡಲಾಯಿತು. ಮಕ್ಕಳು ತುಂಬಾ ಸಂಭ್ರಮದಿಂದ ಮತ ಚಲಾಯಿಸಿದರು. NOTAಕ್ಕೂ ಅವಕಾಶ ನೀಡಲಾಗಿತ್ತು.

ನಾಯಕನ ಸ್ಥಾನಕ್ಕೆ ಮೂವರು ವಿದ್ಯಾರ್ಥಿಗಳು ಮತ್ತು ಉಪನಾಯಕನ ಸ್ಥಾನಕ್ಕೆ ಮೂವರು ವಿದ್ಯಾರ್ಥಿಗಳು ಸ್ಪರ್ಧಿಸಿದ್ದು ಶಾಲಾ ನಾಯಕಿಯಾಗಿ ಆದ್ಯಾ ಪಿ 7ನೇ ತರಗತಿ, ಉಪನಾಯಕನ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಸ್ ವಿ ಧನುಷ್ 6ನೇ ತರಗತಿ ಆಯ್ಕೆಯಾದರು.

ಚುನಾವಣೆ ಅಧಿಕಾರಿಯಾಗಿ ಸಹಶಿಕ್ಷಕ ಆನಂದ ಕುಲಾಲ ಕರ್ತವ್ಯ ನಿರ್ವಹಿಸಿದರೆ,ಸಹ ಶಿಕ್ಷಕಿ ಸಂಧ್ಯಾ ಕೆ, ಮತ್ತು ಗೌರವ ಶಿಕ್ಷಕಿಯರಾದ ಪ್ರಮೀಳಾ, ವಿಶಲಾಕ್ಷಿ, ವೈಶಾಲಿ ಶೆಟ್ಟಿ ಮತ್ತು ನಯನ ಮತಗಟ್ಟೆ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದರು.

ಜೂ.10ರಂದು ಶಾಲಾ ಮುಖ್ಯ ಶಿಕ್ಷಕಿ ಗಿರಿಜಾ ಡಿ. ನೂತನ ಮಂತ್ರಿ ಮಂಡಲದ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು.

 

 

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!