spot_img
Friday, April 3, 2026
spot_img

ಎಚ್‌ಎಸ್‌ಆರ್‌ಪಿ ಅಳವಡಿಕೆ : ಗಡುವು ವಿಸ್ತರಣೆ ಮಾಡಲು ರಾಜ್ಯ ಸರ್ಕಾರಕ್ಕೆ ಅನುಮತಿಸಿದ ಹೈಕೋರ್ಟ್‌

ಜನಪ್ರತಿನಿಧಿ (ಬೆಂಗಳೂರು) :  ಏಪ್ರಿಲ್ 1 2019ಕ್ಕೂ ಮೊದಲು ನೋಂದಾಯಿಸಲ್ಪಟ್ಟ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ನೋಂದಣಿ ಫಲಕಗಳನ್ನು (ಎಚ್‌ಎಸ್‌ಆರ್‌ಪಿ) ಅಳವಡಿಸುವ ಗಡುವನ್ನು ಆಗಸ್ಟ್ ಅಥವಾ ಸೆಪ್ಟೆಂಬರ್‌ವರೆಗೆ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.

ಎಚ್‌ಎಸ್‌ಆರ್‌ಪಿ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ​ ಹಾಗೂ ಇತರರು ಸಲ್ಲಿಸಿದ ಮೇಲ್ಮನವಿಗಳ ವಿಚಾರಣೆಯ ಸಂದರ್ಭದಲ್ಲಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿಕ್ರಮ್ ಹುಯಿಲ್‌ಗೋಳ್ ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆವಿ ಅರವಿಂದ್  ವಿಭಾಗೀಯ ನ್ಯಾಯಪೀಠದ ಮುಂದೆ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವು ವಿಸ್ತರಣೆ ಮಾಡುವ ಬಗ್ಗೆ ಮನವಿ ಸಲ್ಲಿಸಿದರು.

ರಾಜ್ಯ ಸರ್ಕಾರ ಹಿಂದಿನ ಆದೇಶದಿಂದಾಗಿ ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನಿಗದಿ ಮಾಡಲಾಗಿದ್ದ ಗಡುವನ್ನು ವಿಸ್ತರಣೆ ಮಾಡುವ ಸ್ಥಿತಿಯಲ್ಲಿಲ್ಲ. ಜೂನ್ 12 ರವರೆಗೆ ಯಾವುದೇ ಪೂರ್ವಾಪೇಕ್ಷಿತ ಕ್ರಮಗಳನ್ನು ತೆಗೆದುಕೊಳ್ಳದಂತೆ ನಿರ್ಬಂಧಿಸುತ್ತದೆ. ಆದ್ದರಿಂದ, ನ್ಯಾಯಾಲಯ ಹಿಂದಿನ ಆದೇಶವನ್ನು ಮಾರ್ಪಡಿಸಬೇಕು ಎಂದು ಹುಯಿಲಗೋಳ್ ತಿಳಿಸಿದರು.

ಮೇ 21 ರಂದು ನೀಡಲಾದ ಮಧ್ಯಂತರ ಆದೇಶವನ್ನು ಮಾರ್ಪಡಿಸುವ ಮೂಲಕ ಸರ್ಕಾರದ ಮನವಿಯನ್ನು ಪರಿಗಣನೆಗೆ ತೆಗೆದುಕೊಂಡ ನ್ಯಾಯಾಲಯ ಗಡುವನ್ನು ವಿಸ್ತರಿಸುವ ನಿರ್ಧಾರವನ್ನು ತೆಗೆದುಕೊಳ್ಳಲು ಸರ್ಕಾರಕ್ಕೆ ಸ್ವಾತಂತ್ರ್ಯವನ್ನು ನೀಡಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!