spot_img
Sunday, February 15, 2026
spot_img

ಎಬಿವಿಪಿ ಆಗ್ರಹಕ್ಕೆ ಮೊದಲ ಹಂತದ ಸ್ಪಂದನೆ: ಆಜ್ರಿಯಿಂದ ಕುಂದಾಪುರಕ್ಕೆ ಹೊಸ ಬಸ್

ಕುಂದಾಪುರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ವತಿಯಿಂದ ಗ್ರಾಮಾಂತರ ಭಾಗಗಳಿಂದ ಕುಂದಾಪುರ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಜೂ. 8ರಂದು ಶಾಸ್ತ್ರಿ ಸರ್ಕಲ್ ನಿಂದ ತಾಲೂಕು ಆಫೀಸಿನ ವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸಿ, ಕುಂದಾಪುರ ತಹಶೀಲ್ದಾರ, ಕೆ‌ಎಸ್‌ಆರ್ಟಿಸಿ ಡಿಪೋ ಮ್ಯಾನೇಜರ್ ಸೇರಿದಂತೆ, ಕುಂದಾಪುರ ಮತ್ತು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಿಗೆ ಆಗ್ರಹವನ್ನು ಇರಿಸಿ ಎಚ್ಚರಿಸಿದರು ಇದರ ಪರಿಣಾಮ ಮೊದಲ ಹಂತದಲ್ಲಿ ಎಬಿವಿಪಿ ಬೇಡಿಕೆಯಂತೆ ಆಜ್ರಿಯಿಂದ ಕುಂದಾಪುರಕ್ಕೆ ಬಸ್ ಸಂಪರ್ಕ ಕಲ್ಪಿಸಲಾಗಿದೆ.

ಈಗಾಗಲೇ ಆಜ್ರಿಯಿಂದ ನೇರಳಕಟ್ಟೆ ತಲ್ಲೂರು ಮಾರ್ಗವಾಗಿ ಕುಂದಾಪುರಕ್ಕೆ ಮಾಡಿದ ಬಸ್ ವ್ಯವಸ್ಥೆಯಿಂದಾಗಿ ಕೇವಲ ವಿದ್ಯಾರ್ಥಿಗಳಿಗಲ್ಲದೆ ಸಾರ್ವಜನಿಕರಿಗೂ ಸಹಾಯಕವಾಗಿದೆ. ಅನೇಕ ಸಮಯದಿಂದ ಈ ಮಾರ್ಗಕ್ಕೆ ಬಸ್ ನ ಬೇಡಿಕೆ ಇದ್ದರೂ ಅಧಿಕಾರಿಗಳಿಗೆ ವಿವಿಧ ರೀತಿಯಲ್ಲಿ ಮನವಿ ಸಲ್ಲಿಸಿದರೂ ಸಮರ್ಪಕ ಬಸ್ ವ್ಯವಸ್ಥೆ ಮಾಡದ ಅಧಿಕಾರಿಗಳು ಹೋರಾಟ ನಡೆಸಿದ ಐದು ದಿನಗಳ ಒಳಗೆ ಬಸ್ ಬಿಟ್ಟಿರುವುದು ವಿದ್ಯಾರ್ಥಿಗಳ ಧ್ವನಿಯ ಬೆಲೆಯನ್ನು ಸಾರುತ್ತದೆ

ಇನ್ನು ಸುಮಾರು 15 ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಸ್ ವ್ಯವಸ್ಥೆ ಮಾಡುವ ಅವಶ್ಯಕತೆ ಇದ್ದು ಆದಷ್ಟು ಬೇಗ ಇದು ಆಗುವಂತೆ ಮಾರ್ಗದ ಅವಶ್ಯಕತೆಯ ಕುರಿತು ಈಗಾಗಲೇ ಎಬಿವಿಪಿ ವಿದ್ಯಾರ್ಥಿಗಳ ಆಗ್ರಹದ ಧ್ವನಿಯಾಗಿ ಅಧಿಕಾರಿಗಳೊಂದಿಗೆ ಚರ್ಚಿಸುತ್ತಿದೆ ಮತ್ತು ಮುಂದೆ ಬರುವ 15ದಿನಗಳ ವೊಳಗೆ ಎಲ್ಲಾ ಮಾರ್ಗಗಳಿಗೆ ಬಸ್ ವ್ಯವಸ್ಥೆ ಆಗುವ ಭರವಸೆಯೂ ಇದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!