spot_img
Wednesday, April 1, 2026
spot_img

ಸಿಖ್ ಪ್ರತ್ಯೇಕತಾವಾದಿ ಗುರುಪಂತ್‌ ಸಿಂಗ್‌ ಹತ್ಯೆಗೆ ಸಂಚು : ಭಾರತದ ಮೂಲದ ನಿಖಲ್‌ ಗುಪ್ತಾ ಅಮೇರಿಕಾಕ್ಕೆ ಹಸ್ತಾಂತರ

 ಜನಪ್ರತಿನಿಧಿ : ಸಿಖ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ಸೃಷ್ಟಿಸಿದ ಆರೋಪ ಎದುರಿಸುತ್ತಿರುವ ಭಾರತ ಮೂಲದ ನಿಖಿಲ್ ಗುಪ್ತಾ ಅವರನ್ನು ಜೆಕ್ ಗಣರಾಜ್ಯದಿಂದ ಅಮೆರಿಕಾಕ್ಕೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.

ನಿಖಿಲ್ ಅವರನ್ನು ಪನ್ನುನ್ ಹತ್ಯೆ ಸಂಚಿನಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸುವಂತೆ ಅಮೆರಿಕಾ ಮನವಿ ಮಾಡಿತ್ತು. ಇದರಂತೆ ಕಳೆದ ವರ್ಷ ಅವರನ್ನು ಜೆಕ್ ಗಣರಾಜ್ಯದಲ್ಲಿ ಬಂಧಿಸಲಾಗಿತ್ತು. ಇಂದು ಅವರನ್ನು ನ್ಯೂಯಾರ್ಕ್‌ನ ಫೆಡರಲ್ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಗುಪ್ತಾ ಅವರನ್ನು ಸದ್ಯ ಬ್ರೂಕ್ಲಿನ್‌ನ ಫೆಡರಲ್ ಮೆಟ್ರೋಪಾಲಿಟನ್ ವಿಚಾರಣಾ ಕೇಂದ್ರದಲ್ಲಿ ಇರಿಸಲಾಗಿದೆ. ಜೆಕ್ ಗಣರಾಜ್ಯದಲ್ಲಿ ಬಂಧನಕ್ಕೀಡಾಗಿದ್ದ ಗುಪ್ತಾ ಅವರನ್ನು ವಾರಾಂತ್ಯವೇ ಅಮೆರಿಕಕ್ಕೆ ಕರೆತರಲಾಗಿದೆ. ಸಾಮಾನ್ಯವಾಗಿ ಹಸ್ತಾಂತರಗೊಂಡವರನ್ನು ಒಂದು ದಿನದೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಈ ಪ್ರಕರಣದಲ್ಲಿ ಹಾಗೇ ಆಗಿಲ್ಲ. ಕೆಲವು ಸೂಕ್ಷ್ಮ ತನಿಖೆ ನಡೆಯುತ್ತಿರಬಹುದು ಎಂದು ವರದಿಯ ಮೂಲಗಳು ತಿಳಿಸಿವೆ.

ಪನ್ನುನ್ ಕೊಲ್ಲಲು ವ್ಯಕ್ತಿಯೊಬ್ಬರಿಗೆ ಸುಪಾರಿ ನೀಡಿದ್ದ ಗುಪ್ತಾ, ಮುಂಗಡವಾಗಿ 15,000 ಡಾಲರ್ ನೀಡಿದ್ದ ಎಂದು ಪ್ರಾಸಿಕ್ಯೂಟರ್ ಆರೋಪಿಸಿದ್ದಾರೆ. ಹೆಸರು ಬಹಿರಂಗಪಡಿಸದ ಭಾರತೀಯ ಅಧಿಕಾರಿಯೊಬ್ಬರು ಸಹ ಇದರಲ್ಲಿ ಭಾಗಿಯಾಗಿದ್ದಾರೆ ಎಂದೂ ಆರೋಪಿಸಲಾಗಿದೆ.

ವಾರ್ಷಿಕ ಐಸಿಎಟಿ ಮಾತುಕತೆಗಾಗಿ ಅಮೆರಿಕ ಭದ್ರತಾ ಸಲಹೆಗಾರ ಜೆಕ್ ಸುಲ್ಲಿವನ್ ಭಾರತಕ್ಕೆ ಭೇಟಿ ನೀಡುತ್ತಿರುವ ಸಂದರ್ಭದಲ್ಲೇ ಈ ಹಸ್ತಾಂತರ ಪ್ರಕ್ರಿಯೆ ನಡೆದಿದೆ. ಭಾರತದ ಎನ್‌ಎಸ್‌ಎ ಅಜಿತ್ ಢೋಬಾಲ್ ಜೊತೆ ಅವರು ಈ ವಿಷಯ ಪ್ರಸ್ತಾಪಿಸುವ ನಿರೀಕ್ಷೆ ಇದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!