spot_img
Saturday, February 14, 2026
spot_img

ವಯನಾಡು ಲೋಕಸಭಾ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಗಾ ರಾಜೀನಾಮೆ

ಜನಪ್ರತಿನಿಧಿ (ನವದೆಹಲಿ) : ಕಾಂಗ್ರೆಸ್ ನಾಯಕ ರಾಯ್‌ಬರೇಲಿ ಹಾಗೂ ವಯನಾಡಿನ ಸಂಸದ ರಾಹುಲ್ ಗಾಂಧಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದು, ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ ಎಂದು ಲೋಕಸಭೆಯ ಸಚಿವಾಲಯ ತಿಳಿಸಿದೆ.

ಜೂನ್ 18 ರಿಂದ ಜಾರಿಗೆ ಬರುವಂತೆ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ಲೋಕಸಭೆಯ ಬುಲೆಟಿನ್ ಮಾಹಿತಿ ನೀಡಿದೆ.

ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರ ರಾಜಧಾನಿಯಲ್ಲಿರುವ ತಮ್ಮ ನಿವಾಸದಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಿದ ನಂತರ ಎರಡು ಲೋಕಸಭಾ ಕ್ಷೇತ್ರಗಳ ಪೈಕಿ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎನ್ನುವ ಬಗ್ಗೆ ನಿರ್ಧಾರವನ್ನು ಸೋಮವಾರ ಪ್ರಕಟಿಸಿದ್ದರು.

ವಯನಾಡ್ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಚುನಾವಣಾ ರಾಜಕೀಯಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.

ರಾಹುಲ್ ಗಾಂಧಿ ಗೆದ್ದಿದ್ದ ಎರಡು ಕ್ಷೇತ್ರಗಳಲ್ಲಿ ಒಂದಕ್ಕೆ ರಾಜೀನಾಮೆ ನೀಡಿದ ನಂತರ, ಸಂಸತ್ತಿನ ಕೆಳಮನೆಯಲ್ಲಿ ಕಾಂಗ್ರೆಸ್‌ ಸಂಸದರ ಸಂಖ್ಯೆ ಈಗ 98 ಆಗಿದೆ. ಇದೀಗ ರಚನೆಯಾದ 18ನೇ ಲೋಕಸಭೆಯಲ್ಲಿ ಇದು ಮೊದಲ ಖಾಲಿ ಹುದ್ದೆಯಾಗಿದೆ.

‘ಕೇರಳದ ವಯನಾಡ್ ಹಾಗೂ ಉತ್ತರ ಪ್ರದೇಶದ ರಾಯ್ ಬರೇಲಿ ಸಂಸದೀಯ ಕ್ಷೇತ್ರಗಳಿಂದ ಲೋಕಸಭೆಗೆ ಚುನಾಯಿತರಾದ ರಾಹುಲ್ ಗಾಂಧಿ ಲೋಕಸಭೆಯ ಕೇರಳದ ವಯನಾಡ್ ಸಂಸದೀಯ ಕ್ಷೇತ್ರದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಜೂನ್ 18 ರಿಂದ ಜಾರಿಗೆ ಬರುವಂತೆ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ್ದಾರೆ’ ಎಂದು ಲೋಕಸಭೆಯ ಬುಲೆಟಿನ್ ಮಾಹಿತಿ ನೀಡಿದೆ.

ಒಂದು ವೇಳೆ ಪ್ರಿಯಾಂಕಾ ಗಾಂಧಿ ವಯನಾಡ್‌ನಿಂದ ಆಯ್ಕೆಯಾದರೆ, ಇದೇ ಮೊದಲ ಬಾರಿಗೆ ಗಾಂಧಿ ಕುಟುಂಬದ ಮೂವರು ಸದಸ್ಯರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಒಟ್ಟಿಗೆ ಸಂಸತ್ತಿನಲ್ಲಿ ಇರಲಿದ್ದಾರೆ. ರಾಜಸ್ಥಾನದಿಂದ ಸೋನಿಯಾ ಗಾಂಧಿ ಈಗ ರಾಜ್ಯಸಭಾ ಸದಸ್ಯೆಯಾಗಿದ್ದಾರೆ.

ಚುನಾವಣಾ ಕಾನೂನುಗಳಲ್ಲಿ 1996 ರ ತಿದ್ದುಪಡಿಯ ಮೊದಲು, ಒಬ್ಬ ವ್ಯಕ್ತಿಯು ಸ್ಪರ್ಧಿಸಬಹುದಾದ ಕ್ಷೇತ್ರಗಳ ಸಂಖ್ಯೆಗೆ ಯಾವುದೇ ನಿರ್ಬಂಧವಿರಲಿಲ್ಲ. ಅಭ್ಯರ್ಥಿಯು ಎರಡು ಕ್ಷೇತ್ರಗಳಿಂದ ಗೆದ್ದರೆ, ಅವರು ಚುನಾವಣೆಯ 14 ದಿನಗಳಲ್ಲಿ ಒಂದನ್ನು ತ್ಯಜಿಸಬೇಕು ಅಥವಾ ಎರಡೂ ಕ್ಷೇತ್ರಗಳನ್ನು ಕಳೆದುಕೊಳ್ಳುವ ಸಾಧ್ಯತೆಯನ್ನು ಎದುರಿಸಬೇಕಾಗುತ್ತದೆ.

ಗೆದ್ದಿರುವ ಅಭ್ಯರ್ಥಿಗಳು ಜೂನ್ 24 ಮತ್ತು 25 ರಂದು ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹೊಸ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಂದು ಪ್ರಾರಂಭವಾಗುತ್ತದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!