spot_img
Saturday, February 14, 2026
spot_img

ಮಳೆಗಾಲದ ತುರ್ತು ಸ್ಪಂದನೆಗೆ ಎರಡು ತಂಡ ಸಿದ್ಧ | ಶಾಸಕ ಗುರುರಾಜ್ ಗಂಟಿಹೊಳೆ ಮುಂದಾಳತ್ವದಲ್ಲಿ ತಂಡ ಕಾರ್ಯಾಚರಣೆ

ಬೈಂದೂರು: ಮಳೆಗಾಲದಲ್ಲಿ ಸಂಭವಿಸಬಹುದಾದ ವಿಪತ್ತು ನಿರ್ವಹಣೆಗೆ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದಿಂದ ಒಂದು ರೀತಿಯ ಸಿದ್ಧತೆ ಮಾಡಿಕೊಂಡಿದ್ದರೆ, ಬೈಂದೂರು ಕ್ಷೇತ್ರದಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ವಿಶೇಷ ಮೇಲುಸ್ತುವಾರಿಯಲ್ಲಿ ಸಾರ್ವಜನಿಕ ತುರ್ತು ವಿಪತ್ತು ನಿರ್ವಹಣೆಗೆ ಎರಡು ತಂಡ ಗಳನ್ನು ರಚನೆ ಮಾಡಲಾಗಿದೆ.

ಕ್ಷೇತ್ರದ ಕರಾವಳಿ ಭಾಗಕ್ಕೆ ಒಂದಕ್ಕೆ ತಂಡ ಹಾಗೂ ಮಲೆನಾಡು ಭಾಗಕ್ಕೆ ಒಂದು ತಂಡ ರಚನೆ ಮಾಡಲಾಗಿದೆ. ಪ್ರತಿ ತಂಡದಲ್ಲೂ ಹತ್ತು ಸದಸ್ಯರಿದ್ದು, ಮಳೆಗಾಲದಲ್ಲಿ ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ಮಾಹಿತಿ ಬಂದ ತಕ್ಷಣವೇ ತಂಡ ಸದಸ್ಯರು ಸ್ಥಳಕ್ಕೆ ಧಾವಿಸುವುದು ಅಥವಾ ಸ್ಥಳೀಯ ಕಾರ್ಯಕರ್ತರ ಮೂಲಕ ತುರ್ತು ಸ್ಪಂದನೆ ಇತ್ಯಾದಿ ನಡೆಸಲಿದ್ದಾರೆ. ಇದೊಂದು ಶಾಸಕರ ನೇತೃತ್ವದ ಖಾಸಗಿ ವ್ಯವಸ್ಥೆಯಾಗಿದ್ದು, ಬಿಜೆಪಿ ಕಾರ್ಯಕರ್ತರು, ಪ್ರಮುಖರು, ಪಂಚಾಯತ್ ಸದಸ್ಯರು ಸೇರಿಕೊಂಡಿದ್ದಾರೆ.

ತುರ್ತು ಸ್ಪಂದನೆ ಅತಿಮುಖ್ಯ
ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತ ಅಥವಾ ಹಾನಿಗೆ ತುರ್ತು ಸ್ಪಂದನೆ ಅತಿ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಕ್ಕೆ ನಮ್ಮ ಕಾರ್ಯಕರ್ತರ ನೇತೃತ್ವದಲ್ಲಿ ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ. ಈ ತಂಡದ ಸದಸ್ಯರು ಸಮನ್ವಯದಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಮಲೆನಾಡು ತಂಡ: ಸಂಚಾಲಕ : ರಾಘವೇಂದ್ರ ನೆಂಪು : (7892643784) ಸಹ ಸಂಚಾಲಕ : ಲಕ್ಷಣ ಮುದೂರು :(9448142785), ಹರೀಶ ಸೆಳಕೊಡು, ಗುರುಪ್ರಸಾದ ಕೊಲ್ಲೂರು, ಸಿದ್ದೇಶ ಏಳಜಿತ್, ಪ್ರಶಾಂತ ಆಲೂರು, ಪ್ರಜ್ವಲ ಕಾಲ್ತೋಡು, ಹರ್ಷ ಸಿದ್ದಾಪುರ, ಗಣೇಶ ಪೂಜಾರಿ, ಚಂದ್ರ ಜೋಗಿ.

ಕರಾವಳಿ ತಂಡ: ಸಂಚಾಲಕ : ಗೋಪಾಲ ವಸ್ರೆ : (9535959138), ಸಹ ಸಂಚಾಲಕ : ಲಕ್ಷ್ಮೀರಾಜ  ತಲ್ಲೂರು : (9480071959), ಸುಕೇಶ್ ಪೂಜಾರಿ, ಅಶೋಕ ದೇವಾಡಿಗ, ಕೃಷ್ಣ ಕೊಡೇರಿ, ಜಗದಿಶ ಆಲಂದೂರು, ಅವಿನಾಶ ಶಿರೂರು, ಪ್ರದೀಪ ಉಪ್ಪುಂದ, ನಾಗರಾಜ ಪಟೆಗಾರ್, ರಾಮದಾಸ ಖಾರ್ವಿ ತಂಡದಲ್ಲಿರುತ್ತಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!