Sunday, September 8, 2024

ಸಿಎಂ ಮೂರು ದಿನಗಳ ದೆಹಲಿ ಪ್ರವಾಸ : ಜೂನ್ 29ಕ್ಕೆ ಪ್ರಧಾನಿ ಮೋದಿ ಅವರ ಭೇಟಿ

ಜನಪ್ರತಿನಿಧಿ (ಬೆಂಗಳೂರು ) : ಮೂರು ದಿನಗಳ ದೆಹಲಿ ಪ್ರವಾಸದ ವೇಳೆ ಜೂನ್ 29 ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರದಿಂದ ಅನುಮೋದನೆಗೆ ಬಾಕಿ ಇರುವ ರಾಜ್ಯ ಯೋಜನೆಗಳ ಬಗ್ಗೆ ಕೇಂದ್ರ ಸಚಿವರೊಂದಿಗೆ ಮುಖ್ಯಮಂತ್ರಿಗಳು ಚರ್ಚಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ,  ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದೇನೆ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಲು ಪ್ರಯತ್ನಿಸುತ್ತೇನೆ. ಗೃಹ ಸಚಿವರು ಇನ್ನೂ ಸಮಯ ನೀಡಿಲ್ಲ. ಜೂನ್ 29 ರಂದು ಪ್ರಧಾನಿ ಭೇಟಿಗೆ ಅಪಾಯಿಂಟ್ ಮೆಂಟ್ ನೀಡಿದ್ದಾರೆ ಎಂದು ವರದಿಗಾರರಿಗೆ ಸ್ಪಂದಿಸಿ ಮಾಹಿತಿ ನೀಡಿದ್ದಾರೆ.

ಇಂದು ದೆಹಲಿಗೆ ತೆರಳುವ ಮುಖ್ಯಮಂತ್ರಿಗಳು ರಾಜ್ಯದಿಂದ ಚುನಾಯಿತ ಸಂಸದರು ಹಾಗೂ ಕೇಂದ್ರ ಸಚಿವರ ಸಭೆಯನ್ನು ಕರೆದಿದ್ದಾರೆ, ಈ ಸಂದರ್ಭದಲ್ಲಿ ಕೇಂದ್ರದ ಅನುಮೋದನೆಗೆ ರಾಜ್ಯಕ್ಕೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೇಂದ್ರ ಸರ್ಕಾರದ ಮಟ್ಟದಲ್ಲಿ ಬಾಕಿ ಉಳಿದಿರುವ ಯೋಜನೆಗಳ ಪಟ್ಟಿಯನ್ನು ನಾವು ಹಂಚಿಕೊಳ್ಳುತ್ತೇವೆ ಹಾಗೂ ಯೋಜನೆಗಳಿಗೆ ಅನುಮೋದನೆ ಮತ್ತು ಕೇಂದ್ರದಿಂದ ಹಣ ಪಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರದ ಪರವಾಗಿ ಪ್ರಯತ್ನಗಳನ್ನು ಮಾಡುವಂತೆ, ರಾಜ್ಯಕ್ಕೆ ಸಂಪನ್ಮೂಲ ಕ್ರೋಢೀಕರಣಕ್ಕೆ ಸಹಾಯ ಮಾಡುವಂತೆ ಕೇಳಿಕೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಯೋಜನೆಗಳ ಬಗ್ಗೆ ವಿವರಿಸಲು ರಾಜ್ಯ ಸರ್ಕಾರದ ಸಂಬಂಧಪಟ್ಟ ಸಚಿವರು ದೆಹಲಿಗೆ ಬರಲಿದ್ದಾರೆ ಎಂದು ಅವರು ಹೇಳಿದರು. ಕೇಂದ್ರದ ಹೊಸ ಸರ್ಕಾರ ಮಂಡಿಸಲಿರುವ ಮೊದಲ ಬಜೆಟ್‌ನಿಂದ ಕರ್ನಾಟಕದ ನಿರೀಕ್ಷೆಗಳೇನು ಎಂಬ ಪ್ರಶ್ನೆಗೆ, ರಾಜ್ಯ ಸರ್ಕಾರವು ಈಗಾಗಲೇ ಸಚಿವ ಕೃಷ್ಣ ಬೈರೇಗೌಡರ ಮೂಲಕ ಕೇಂದ್ರದೊಂದಿಗೆ ತನ್ನ ಆಲೋಚನೆಗಳನ್ನು ಹಂಚಿಕೊಂಡಿದೆ ಎಂದು ಮುಖ್ಯಮಂತ್ರಿ ಹೇಳಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!