Sunday, September 8, 2024

ಬೈಂದೂರು ವಲಯದ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಗಾರ

ಬೈಂದೂರು: ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಉಡುಪಿ ಜಿಲ್ಲೆ, ಬೈಂದೂರು ವಲಯ ಒಂದು ದಿನದ ಶೈಕ್ಷಣಿಕ ಕಾರ್ಯಗಾರ ಎಂ ಭಾಸ್ಕರ್ ಪೈ ಸರ್ಕಾರಿ ಪ್ರೌಢಶಾಲೆ ಗುಜ್ಜಾಡಿ ಇಲ್ಲಿ ನಡೆಯಿತು.

ಸಭಾಧ್ಯಕ್ಷತೆಯನ್ನು ಸದಾನಂದ ಮೋವಾಡಿ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿ ಆಜಾದ್ ಅಹ್ಮದ್ ಅವರನ್ನು ಸನ್ಮಾನಿಸಲಾಯಿತು ಕಾರ್ಯಕ್ರಮದಲ್ಲಿ ಕಂಬದ ಕೋಣೆ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿರುವ ಪ್ರಕಾಶ್ ಚಂದ್ರ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾದಿಕಾರಿ ಚಂದ್ರಶೇಖರ್ ಶೆಟ್ಟಿ, ಎಸ್ ಡಿ ಎಂ ಸಿ ಸದಸ್ಯರಾಗಿರುವ ನಾಗರಾಜ್ ಮೋವಾಡಿ, ಜಿಲ್ಲಾ ಸಂಘದ ಉಪಾಧ್ಯಕ್ಷರಾಗಿರುವ ರವಿಶಂಕರ್ ಹೆಗ್ಡೆ, ಯುವಜನ ಕ್ರೀಡಾಧಿಕಾರಿ ಪ್ರಭಾಕರ್ ಎಸ್., ಸಂಘದ ಗೌರವ ಅಧ್ಯಕ್ಷರಾದ ರಾಜು ಎಸ್ ಮಯ್ಯಾಡಿ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಜಾದ್ ಅಹಮದ್ ಹಾಗೂ ಮಂಜುನಾಥ್ ಶೆಟ್ಟಿ ಕಾರ್ಯನಿರ್ವಹಿಸಿದರು. ಸಂಘದ ಅಧ್ಯಕ್ಷರಾಗಿರುವ ಅರುಣ್ ಕುಮಾರ್ ಶೆಟ್ಟಿ ಸ್ವಾಗತಿಸಿ ಕಾರ್ಯದರ್ಶಿ ಗುರುರಾಜ್ ಪೂಜಾರಿ ವಂದಿಸಿ ರಾಜೀವ ಶೆಟ್ಟಿ ನೀಡುಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!