Sunday, September 8, 2024

ತೆಕ್ಕಟ್ಟೆ: ಗಣಪತಿ ಟಿ.ಶ್ರೀಯಾನ್ ಹಾಗೂ ಕೃಷ್ಣ ಮೊಗವೀರ ಅವರಿಗೆ ಅಭಿನಂದನಾ ಕಾರ್ಯಕ್ರಮ

ತೆಕ್ಕಟ್ಟೆ: ಸೇವಾ ನಿರತ ಸಾಧಕ ಸಂಸ್ಥೆಗಳ ಪದಾಧಿಕಾರಿಯಾಗುವುದು ಯೋಗ. ಅನವರತವೂ ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ ಸಮಾಜಮುಖಿಯಾಗಿ ಕಾಣಿಸಿಕೊಂಡ ಗಣಪತಿ ಟಿ. ಶ್ರೀಯಾನ್ ಹಾಗೂ ಕೃಷ್ಣ ಮೊಗವೀರ ಈರ್ವರೂ ಸೇವಾ ನಿರತರು. ಯಶಸ್ವೀ ಕಲಾವೃಂದ ಇಂತಹ ಅನೇಕ ಪ್ರತಿಭಾನ್ವಿತರನ್ನು ಇದೇ ವೇದಿಕೆಯಲ್ಲಿ ಗುರುತಿಸಿರುವುದು ಸ್ತುತ್ಯರ್ಹ. ಸಾಮಾಜಿಕ ಬದ್ಧತೆ ಇರುವವರನ್ನು ಮಾತ್ರ ರೋಟರಿಯಂತಹ ಸಂಸ್ಥೆ ಗುರುತಿಸುವುದು. ಇಂತಹವರು ಸಮಾಜದಲ್ಲಿ ಬಹು ಎತ್ತರಕ್ಕೆ ಏರುವುದಕ್ಕೆ ಸಾಧ್ಯ. ಯಶಸ್ವೀ ಕಲಾವೃಂದ ಚಿಕ್ಕ ಚಿಕ್ಕ ಮಕ್ಕಳನ್ನು ಸಾಂಸ್ಕೃತಿಕವಾಗಿ ಬೆಳೆಸಿ ಕಲಾತ್ಮಕ ಬದುಕನ್ನು ಕಲ್ಪಿಸುವಂತಹ ಸಂಸ್ಥೆ. ಸಂಸ್ಥೆಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಾ ರೋಟರಿ ಸಂಸ್ಥೆಯ ಚುಕ್ಕಾಣಿ ಹಿಡಿದಿರುವುದು ನಿಜಕ್ಕೂ ಶ್ಲಾಘನೀಯ ಎಂದು ಹೆರಿಯ ಮಾಸ್ಟರ್ ಅಭಿಪ್ರಾಯಪಟ್ಟರು.

ತೆಕ್ಕಟ್ಟೆ ಹಯಗ್ರೀವದಲ್ಲಿ ಜುಲೈ 6ರಂದು ಯಶಸ್ವೀ ಕಲಾವೃಂದ ಕೊಮೆ, ತೆಕ್ಕಟ್ಟೆ ಆಶ್ರಯದಲ್ಲಿ ದಿಮ್ಸಾಲ್ ಫಿಲ್ಮ್ಸ್ ಹಾಗೂ ಧಮನಿ ಟ್ರಸ್ಟ್ ಸಹಯೋಗದೊಂದಿಗೆ ಸಿನ್ಸ್ 1999 ಶ್ವೇತಯಾನ-40ರ ಕಾರ್ಯಕ್ರಮದಡಿಯಲ್ಲಿ ರೋಟರಿ ಕ್ಲಬ್ ತೆಕ್ಕಟ್ಟೆಯ ನೂತನ ಅಧ್ಯಕ್ಷರಾದ ರೊ| ಗಣಪತಿ ಟಿ. ಶ್ರೀಯಾನ್ ಹಾಗೂ ಕಾರ್ಯದರ್ಶಿಯಾದ ರೊ| ಕೃಷ್ಣ ಮೊಗವೀರ ಇವರನ್ನು ಅಭಿನಂದಿಸಿ ಹೆರಿಯ ಮಾಸ್ಟರ್ ಮಾತನ್ನಾಡಿದರು.

ಈ ಈರ್ವರೂ ಪದಾಧಿಕಾರಿಗಳೂ ಬಹಳಷ್ಟು ಶ್ರಮಿಸುತ್ತಿರುವುದು ಸಮಾಜ ಮನಗಂಡಿದೆ. ಯಶಸ್ವೀ ಕಲಾವೃಂದ ಸಂಸ್ಥೆಗೆ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳು ತಿಂಗಳ ಅಂತರದಲ್ಲಿಯೇ ವೇದಿಕೆ ಏರಿ ತಾಳಮದ್ದಳೆಯಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಷಯ. ಶ್ವೇತಯಾನ ಕಾರ್ಯಕ್ರಮಕ್ಕೆ ಪೋಷಕರು ಹಾಗೂ ಪ್ರಾಯೋಜಕರು ಪ್ರೋತ್ಸಾಹಿಸುತ್ತಿರುವುದು ಸಂಸ್ಥೆಗೆ ಹೆಮ್ಮೆ ತಂದಿದೆ ಎಂದು ಯಕ್ಷಗುರು ಲಂಬೋದರ ಹೆಗಡೆ ನಿಟ್ಟೂರು ಮಾತನ್ನಾಡಿದರು.

ಪ್ರಾಚಾರ್ಯ ದೇವದಾಸ್ ರಾವ್ ಕೂಡ್ಲಿ, ಗುರುಗಳಾದ ಕೃಷ್ಣಯ್ಯ ಆಚಾರ್ ಬಿದ್ಕಲ್‌ಕಟ್ಟೆ, ಮೋಹನಚಂದ್ರ ಪಂಜಿಗಾರು, ದೀಪಿಕಾ ಸಾಮಗ, ಗೋಪಾಲ ಪೂಜಾರಿ ಕುಂದಾಪುರ ಉಪಸ್ಥಿತರಿದ್ದರು.

ಬಳಿಕ ಯಶಸ್ವೀ ಕಲಾವೃಂದ ಮಕ್ಕಳ ಮೇಳದ ಕಲಾವಿದರಿಂದ ಸುಧನ್ವಾರ್ಜುನ ಯಕ್ಷಗಾನ ತಾಳಮದ್ದಳೆ ರಂಗದಲ್ಲಿ ಪ್ರಸ್ತುತಿಗೊಂಡಿತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!