spot_img
Tuesday, March 31, 2026
spot_img

ಕುಂದಾಪುರ: ಹಲಸು ಹಾಗೂ ಕೃಷಿ ಮೇಳಕ್ಕೆ ತೆರೆ

ಕುಂದಾಪುರ: ರೈತವ್ಯಾಪ್ತಿ ವರ್ಗದವರಿಗೆ, ಹಾಗೂ ಗ್ರಾಹಕರಿಗೆ ಅನುಕೂಲವಾಗುವಂತಹ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಕ್ರೌನ್ ಆಯೋಜಿಸಿರುವುದು ಅಭಿನಂದನೀಯ. ಮುಖ್ಯವಾಗಿ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಇಂಥಹ ಕಾರ್ಯಕ್ರಮಗಳು ಪೂರಕವಾಗಬೇಕು. ಈ ಮೂರು ದಿನಗಳಲ್ಲಿ ಸುಮಾರು 20,000 ಗಿಡಗಳ ವ್ಯಾಪಾರ ಮಾರಾಟವಾಗಿರುವುದು ಕೇಳಿ ಸಂತೋಷವಾಯಿತು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಕುಂದಾಪುರದ ನೆಹರು ಮೈದಾನದಲ್ಲಿ ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ನೇತೃತ್ವದಲ್ಲಿ ಕೃಷಿ, ತೋಟಗಾರಿಕಾ ಇಲಾಖೆಯ ಸಹಕಾರದೊಂದಿಗೆ ಮೂರು ದಿನಗಳ ಕಾಲ ನಡೆದ ಹಲಸು ಮತ್ತು ಕೃಷಿ ಮೇಳ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ಅಧ್ಯಕ್ಷ ದಿನಕರ್ ಶೆಟ್ಟಿ ಮಾತನಾಡಿ, ಈ ಭಾಗದ ಕೃಷಿಕರಿಗೆ ವಿವಿಧ ತಳಿಯ ಹಲಸು ಮತ್ತು ಅದರ ಮೌಲ್ಯ ವರ್ಧಿತ ಉತ್ಪನ್ನಗಳ ಪರಿಚಯಕ್ಕಾಗಿ ಸಮಗ್ರ ಮಾಹಿತಿ ನೀಡುವುದು ಹಾಗೂ ಕುಂದಾಪುರದ ಸುತ್ತಮುತ್ತಲಿನ ಜನತೆಗೆ ಸಣ್ಣ ಜಾಗದಲ್ಲಿ ಬೆಳೆಸುವ ಗಿಡಗಳ ಬಗ್ಗೆ ಮಾಹಿತಿ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಿಂದ ಹಾಗೂ ಕೇರಳದಿಂದ ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳನ್ನು ಪರಿಚಯವಾಗಬೇಕು ಎಂಬ ಉದ್ದೇಶದಿಂದ ಈ ಮೇಳವನ್ನು ಆಯೋಜಿಸಲಾಯಿತು. ಈ ಮೇಳದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಲಯನ್ ಜಿಲ್ಲಾ ಗವರ್ನರ್ ಮಹಮ್ಮದ್ ಹನೀಫ್, ದ್ವಿತೀಯ ಜಿಲ್ಲಾ ಗವರ್ನರ್ ರಾಜೀವ ಕೋಟ್ಯಾನ್, ಜಗದೀಶ್ ಶೆಟ್ಟಿ, ಕುದ್ರುಕೋಡು, ಅದ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ, ನಿಯೋಜಿತ ಅಧ್ಯಕ್ಷರಾದ ದಿನಕರ್ ಶೆಟ್ಟಿ, ಕಾರ್ಯದರ್ಶಿ ಶ್ರೀಧರ್ ಮರವಂತೆ, ಕೋಶಾಧಿಕಾರಿ ಜಗದೀಶ್ ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!