Sunday, September 8, 2024

ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಗಳು : 38ನೇ ಸಂಸ್ಥಾಪನಾ ದಿನಾಚರಣೆ

ಕುಂದಾಪುರ: ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ, ಸಂಸ್ಥೆಯ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ರವರ ಅಧ್ಯಕ್ಷತೆಯಲ್ಲಿ , ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರ ಉಪಸ್ಥಿತಿಯಲ್ಲಿ 38ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.

ಉಡುಪಿ ಜಿಲ್ಲೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ. ಕೆ, ಸುಮಾ ಉಮೇಶ್ ಪುತ್ರನ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಸ್ವಾಗತಿಸಿದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಪ್ರಮೀಳಾ ಡಿಸೋಜ ವಂದಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಹಾಗೂ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ರೇಷ್ಮಾ ಡಿಸೋಜ ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಶಿಕ್ಷಕಿ ಸೌಮ್ಯ ನಾವಡ ಕಾರ್ಯಕ್ರಮ ನಿರೂಪಿಸಿದರು.

ಈ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ.ಯ ಸಾಧಕರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಸುಮಾರು 200 ಬೋಧಕ ಬೋಧಕೇತರ ಸಿಬ್ಬಂದಿಯವರಿಗೆ ಬೆಳ್ಳಿಯ ಲೋಟವನ್ನು ನೆನಪಿನ ಕಾಣಿಕೆಯಾಗಿ ನೀಡಲಾಯಿತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!