spot_img
Friday, May 23, 2025
spot_img

ಬ್ರಹ್ಮಾವರದಲ್ಲಿ ಕೃಷಿ ಡಿಪ್ಲೋಮಾ ಕೋರ್ಸ್ ಪುನಃ ಪ್ರಾರಂಭಿಸಲು ಸರ್ಕಾರದ ಆದೇಶ

ಬ್ರಹ್ಮಾವರ: ಬ್ರಹ್ಮಾವರ ಕೃಷಿ ಸಂಶೋಧನ ಕೇಂದ್ರದಲ್ಲಿ 2024-25 ನೇ ಸಾಲಿನಿಂದ ಎರಡು ವರ್ಷಗಳ ಕೃಷಿ ಡಿಪ್ಲೋಮಾ (ಕೃಷಿ) ಕೋರ್ಸ್ ಆರಂಭಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ

ರಾಜ್ಯ ಕೃಷಿ ಇಲಾಖೆಯ ಅಧೀನ ಕಾರ್ಯದರ್ಶಿ ಇಂದ್ರ ಎಂ ಅವರು ಹೊರಡಿಸಿರುವ ಸರ್ಕಾರಿ ಆದೇಶದಲ್ಲಿ, ಇಲಾಖೆಯ 33 ನೇ ಸಮನ್ವಯ ಸಮಿತಿ ಹಾಗೂ 7ನೇ ಪರಿಣಿತ ಸಮಿತಿ ಸಭೆಯ ತೀರ್ಮಾನದಂತೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದಡಿಯಲ್ಲಿ ಬ್ರಹ್ಮಾವರದ ಕೃಷಿ ಸಂಶೋಧನ ಕೇಂದ್ರದಲ್ಲಿ ಲಭ್ಯವಿರುವ ಕಟ್ಟಡ, ಮೂಲ ಸೌಕರ್ಯ ಹಾಗೂ ಬೋಧನಾ ಸಿಬ್ಬಂದಿಗಳನ್ನು ಬಳಸಿಕೊಂಡು, ಸರ್ಕಾರಕ್ಕೆ ಹೆಚ್ಚುವರಿ ಅನುದಾನಕ್ಕೆ ಪ್ರಾಸ್ತಾಪನೆ ಸಲ್ಲಿಸದಂತೆ ಷರತ್ತು ವಿಧಿಸಿ, 2024-25 ನೇ ಸಾಲಿನಿಂದಲೇ ಎರಡು ವರ್ಷಗಳ ಕೃಷಿ ಡಿಪ್ಲೋಮಾ ಕೋರ್ಸ್ ಆರಂಭಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!