spot_img
Wednesday, April 1, 2026
spot_img

ಶ್ರೀ ನಾರಾಯಣ ಮಹಿಳಾ ಸಹಕಾರ ಸಂಘದ ವತಿಯಿಂದ ಸಂಸದರಿಗೆ ಮನವಿ

ಕುಂದಾಪುರ: ಶ್ರೀ ನಾರಾಯಣಗುರು ಮಹಿಳಾ ಸಹಕಾರ ಸಂಘ ನಿ., ಕುಂದಾಪುರ ಇಲ್ಲಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಂಘದ ವತಿಯಿಂದ ನೂತನ ಸಂಸದರನ್ನು ಸನ್ಮಾನಿಸಲಾಯಿತು. ಇದೇ ವೇಳೆ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲಸೌಲಭ್ಯ ಒದಗಿಸುವಂತೆ ಸಂಘದ ಅಧ್ಯಕ್ಷೆ ಗುಣರತ್ನ ಸಂಸದರಿಗೆ ಮನವಿ ಸಲ್ಲಿಸಿದರು.

ಸಂಸ್ಥೆಯು 2023ರಲ್ಲಿ ಆರಂಭವಾಗಿದ್ದು 1000ಕ್ಕೂ ಅಧಿಕ ಮಹಿಳಾ ಸದಸ್ಯರನ್ನು ಒಳಗೊಂಡಿದೆ. ಸಂಸ್ಥೆಯ ಮುಖ್ಯ ಧ್ಯೇಯೋದ್ದೇಶ ಮಹಿಳಾ ಸಬಲೀಕರಣ ಆಗಿದ್ದು ಈಗಾಗಲೇ 150ಕ್ಕೂ ಮಿಕ್ಕಿ ಸ್ವ-ಸಹಾಯ ಸಂಘಗಳನ್ನು ಪ್ರಾರಂಭಿಸಿ ಅಂದಾಜು ರೂ.2 ಕೋಟಿಯ ತನಕ ಸಾಲ ಸೌಲಭ್ಯವನ್ನು ನೀಡಿ ಮಹಿಳಾ ಸ್ವಾವಲಂಬನೆಗೆ ನೆರವಾಗಿದೆ, ಇನ್ನೂ ಹೆಚ್ಚಿನ ಮಹಿಳೆಯರಿಗೆ ನೆರವಾಗುವ ಗುರಿಯನ್ನು ಸಂಸ್ಥೆಯು ಹೊಂದಿದ್ದು ಸರಕಾರದ ವತಿಯಿಂದ ಸಂಬಂಧಿತ ಯೋಜನೆಯ ಮೂಲಕ ಮಹಿಳೆಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲು ಅವಕಾಶವಿದ್ದಲ್ಲಿ ಅದರ ವ್ಯಾಪ್ತಿಗೆ ಈ ಸಹಕಾರ ಸಂಘವನ್ನು ಒಳಪಡಿಸುವಂತೆ ಮನವಿ ಮಾಡಲಾಯಿತು.

ಸಂಘದ ಉಪಾಧ್ಯಕ್ಷೆ ಉಪಾಧ್ಯಕ್ಷೆ ಸುನೇತ್ರಾ ಸತೀಶ, ನಿರ್ದೇಸಕರಾದ ನಿರ್ಮಲ ಆರ್., ಅಶ್ವಿನಿ, ಕುಸುಮ ಆರ್.ಪೂಜಾರಿ, ಆರತಿ ಜಿ.ಪೂಜಾರಿ, ಬೇಬಿ ಶ್ರೀಕಾಂತ, ಹೇಮಾವತಿ, ಗಾಯತ್ರಿ, ಜಾನಕಿ, ಶ್ರೀಮತಿ, ಸೀಮಾಚಂದ್ರ ಪೂಜಾರಿ, ಪ್ರೇಮ ಸಿ.ಎಸ್ ಪೂಜಾರಿ, ಲಕ್ಷ್ಮೀ ಪೂಜಾರಿ, ಶ್ರೀದೇವಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೀಪಾ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!