spot_img
Saturday, February 14, 2026
spot_img

ಮುಂದುವರಿದ ಮಳೆ : ನಾಳೆ (ಜುಲೈ 19) ಉಡುಪಿ ಜಿಲ್ಲೆಯಾದ್ಯಂತ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ

ಜನಪ್ರತಿನಿಧಿ (ಉಡುಪಿ) : ಉಡುಪಿ ಜಿಲ್ಲೆಯಾದ್ಯಂತ ಕಳೆದೊಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣದಿಂದ ನಾಳೆ (ಶುಕ್ರವಾರ, ಜುಲೈ 19) ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

ಭಾರಿ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಇಂದು(ಗುರುವಾರ) ರೆಡ್ ಅಲರ್ಟ್ ಘೋಷಿಸಲಾಗಿತ್ತು.

ಜಿಲ್ಲೆಯಾದ್ಯಂತ ಗಾಳಿ ಮಳೆ ಬಿಡುವಿಲ್ಲದೆ ಸುರಿಯುತ್ತಿದೆ. ಜಿಲ್ಲೆಯ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ತಗ್ಗು ಪ್ರದೇಶಗಳಲ್ಲಿ ನೆರೆ ಬಂದಿದ್ದು ಜನಜೀವನ ಹೈರಾಣಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನಾಳೆ (ಶುಕ್ರವಾರ)ವೂ ರೆಡ್ ಅಲರ್ಟ್ ಘೋಷಿಸಲಾಗಿದೆ. ನಾಳೆಯಿಂದ ಪುಷ್ಯ ಮಳೆ ಆರಂಭವಾಗಲಿದೆ, ಮಳೆ ಮತ್ತೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!