spot_img
Sunday, February 15, 2026
spot_img

ಜು.27ರಿಂದ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ-2024

ಗಂಗೊಳ್ಳಿ : ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಕ್ರೋಧಿ ನಾಮ ಸಂವತ್ಸರದ ಚಾತುರ್ಮಾಸ್ಯ ವೃತ-2024 ಬೆಂಗಳೂರಿನ ಬಸವನಗುಡಿಯ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ದ್ವಾರಕಾನಾಥ ಭವನದಲ್ಲಿ ಜು.27ರಿಂದ ಸೆ.18ರವರೆಗೆ ನಡೆಯಲಿದೆ.

ಜು.27ರಂದು ವ್ಯಾಸ ಪೂಜೆಯೊಂದಿಗೆ ಶ್ರೀಗಳು ಚಾತುರ್ಮಾಸ್ಯ ವೃತ ಸ್ವೀಕರಿಸಲಿದ್ದಾರೆ. ಚಾತುರ್ಮಾಸ್ಯ ಅವಧಿಯಲ್ಲಿ ನಾಗ ಪಂಚಮಿ, ಶ್ರೀ ಕೃಷ್ಣ ಜನ್ಮಾಷ್ಟಮಿ, ಶ್ರೀ ಗಣೇಶ ಚತುರ್ಥಿ, ಶ್ರೀಮದ್ ಅನಂತ ವೃತ ಮೊದಲಾದ ಧಾರ್ಮಿಕ ಹಬ್ಬಗಳ ಆಚರಣೆ ಸಹಿತ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಸೆ.18ರಂದು ಮೃತ್ತಿಕಾ ವಿಸರ್ಜನೆಯೊಂದಿಗೆ ಚಾತುರ್ಮಾಸ್ಯ ವೃತ ಸಮಾಪ್ತಿಯಾಗಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!