spot_img
Wednesday, April 1, 2026
spot_img

ಇನ್ಮುಂದೆ ಶಾಲಾ ಮಕ್ಕಳಿಗೆ ವಾರದಲ್ಲಿ ನಾಲ್ಕು ದಿನ ಮೊಟ್ಟೆ ವಿತರಣೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ. ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್‌ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು, ಅಜೀಂ ಪ್ರೇಮ್‌ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ವೈಜ್ಞಾನಿಕವಾಗಿ, ವೈಚಾರಿಕವಾಗಿ ಮಕ್ಕಳು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗಲು ಸಾಧ್ಯ. ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೆ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಖಾನ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!