spot_img
Wednesday, April 1, 2026
spot_img

ಬೈಂದೂರು ವ್ಯಾಪ್ತಿಯಲ್ಲಿ ಹೆಚ್ಚು ಬಸ್ ಸೌಲಭ್ಯ ಕಲ್ಪಿಸಲು ಕ್ರಮ-ಸಚಿವ ರಾಮಲಿಂಗ ರೆಡ್ಡಿ |ಬೈಂದೂರು ಕ್ಷೇತ್ರದಲ್ಲಿ ಬಸ್‌ಗಳ ಸಮಸ್ಯೆ ಸರ್ಕಾರದ ಗಮನ ಸಳೆದ ಶಾಸಕ ಗಂಟಿಹೊಳೆ

( ಜನಪ್ರತಿನಿಧಿ ವಾರ್ತೆ) ಬೆಂಗಳೂರು: ಸರ್ಕಾರದ ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಹೆಚ್ಚಿನ ಸಾರಿಗೆ ಸೌಲಭ್ಯವನ್ನು ಕಲ್ಪಿಸುವಂತೆ ಕೋರಿ ವಿದ್ಯಾರ್ಥಿಗಳಿಂದ ಹಾಗೂ ಸಾರ್ವಜನಿಕರಿಂದ ಬೇಡಿಕೆಗಳು ಬರುತ್ತಿದ್ದು ಅದರಂತೆ ಬೇಡಿಕೆ ಆಧರಿಸಿ ಮೊದಲ ಆದ್ಯತೆಯಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಬಸ್ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿಯವರು ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ.

ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಇವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕ ಪ್ರಯಾಣಿಕರು / ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಒಟ್ಟು 25 ಸಾಮಾನ್ಯ ಸಾರಿಗೆ ಗಳಿಂದ 157 ಸುತ್ತುವಳಿಗಳಲ್ಲಿ ಸಾರಿಗೆ ಸೌಲಭ್ಯ ಕಲ್ಪಿಸಲಾಗಿರುತ್ತದೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಬೇಡಿಕೆಗೆ ಅನುಗುಣವಾಗಿ ಕುಂದಾಪುರ – ಬೋಳಂಬಳ್ಳಿ, ಕುಂದಾಪುರ – ಸಿದ್ಧಾಪುರ, ಕುಂದಾಪುರ – ಬಡಾಕೆರೆ, ಕುಂದಾಪುರ – ಭಟ್ಕಳ, ಕುಂದಾಪುರ – ಅಜ್ರಿ ಕುಂದಾಪುರ – ತೊಂಬಟ್ಟು ಮಾರ್ಗಗಳಿಗೆ ಸುತ್ತುವಳಿ / ಸಮಯ ಪರಿಷ್ಕರಣೆ ಮಾಡಿ ಹೆಚ್ಚುವರಿಯಾಗಿ ಸಾರಿಗೆ ಸೌಲಭ್ಯ ಕಲ್ಪಿಸಲಾಗಿರುತ್ತದೆ ಎಂದರು.

ಅಲ್ಲದೆ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪರವಾನಿಗೆ ಹೊಂದಿರುವ ಪರವಾನಗಿಗಳಲ್ಲಿ ಕುಂದಾಪುರ – ತೊಂಬಟ್ಟು ವಯಾ ಕೋಟೇಶ್ವರ – ಹುಣಸೆಮಕ್ಕಿ – ಬಿದ್ಕಲ್ ಕಟ್ಟೆ – ಹಾಲಾಡಿ – ಅಮಾಸೆಬೈಲು ಮಾರ್ಗದಲ್ಲಿ ಕಾರ್ಯಾಚರಿಸಲಾಗುತ್ತಿದ್ದ ಸಾರಿಗೆಯನ್ನು ಸಾರಿಗೆ ಆದಾಯ ಕಡಿಮೆ ಬರುತ್ತಿದ್ದ ಹಿನ್ನಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ ವಿದ್ಯಾರ್ಥಿಗಳು /ಸಾರ್ವಜನಿಕರ ಅನುಕೂಲಕ್ಕಾಗಿ ಸದರಿ ಮಾರ್ಗದ ಸಾರಿಗೆಯನ್ನು ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗಿರುತ್ತದೆ. ಮುಂದುವೆರೆದು ಕುಂದಾಪುರ – ಕೊಲ್ಲೂರು ವಯಾ ಬಸ್ರೂರು – ಕಂಡ್ಲೂರು – ವಾಲ್ತೂರು- ನೇರಳಕಟ್ಟೆ – ವಂಡ್ಸೆ – ಚಿತ್ತೂರು ಮಾರ್ಗದಲ್ಲಿ ಸಾರಿಗೆ ಗಳನ್ನು ಕಾರ್ಯಾಚರಣೆಗೊಳಿಸಲು ಚಾಲನಾ ಸಿಬ್ಬಂದಿ ಗಳು / ವಾಹಗಳ ಕೊರತೆಯಿಂದ ಸಾಧ್ಯವಾಗಿರುವುದಿಲ್ಲ. ಪ್ರಸ್ತುತ ನಿಗಮದಲ್ಲಿ ಹೊಸ ವಾಹನಗಳ ಸೇರ್ಪಡೆ /ಚಾಲನ ಸಿಬ್ಬಂದಿಯ ನೇರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ವಾಹನ / ಸಿಬ್ಬಂದಿ ನಿಗಮಕ್ಕೆ ಸೇರ್ಪಡೆಯಾದ ನಂತರ ಅವಶ್ಯಕತೆಗೆ ಅನುಗುಣವಾಗಿ ಸಾರಿಗೆ ಸೌಲಭ್ಯ ಕಲ್ಪಿಸಲು ಹಂತ ಹಂತವಾಗಿ ಕ್ರಮ ವಹಿಸಲಾಗುವುದು ಎಂದರು.

ಯಾವ ರೂಟ್ ಗಳಲ್ಲಿ ಬಸ್ ಸೇವೆ ಇಲ್ಲವೋ ಅಲ್ಲಿಗೆ ಆದ್ಯತೆ ಮೆರೆಗೆ ಸರ್ಕಾರಿ ಬಸ್ ಓಡಿಸಬೇಕು. ಲಾಭದಾಯಕ ರೂಟ್ ಗಳಲ್ಲಿ ಮಾತ್ರ ಸಂಚಾರ ಮಾಡುವಂತೆ ಆಗಬಾರದು ಎಂದು ಶಾಸಕರು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!