spot_img
Tuesday, March 31, 2026
spot_img

ಕಡಲ್ಕೊರೆತ : ಶಾಶ್ವತ ಪರಿಹಾರ ಮಾಡದಿದ್ದಲ್ಲಿ ಸುದೀರ್ಘ ಹೋರಾಟ : ಗಂಟಿಹೊಳೆ

ಜನಪ್ರತಿನಿಧಿ (ಬೈಂದೂರು) : ತೀವ್ರ ಮಳೆಯಿಂದಾಗಿ ಕಡಲು ಪ್ರಕ್ಷುಬ್ಧಗೊಂಡಿದ್ದು ಮರವಂತೆ, ಕಂಚುಗೋಡು ಪ್ರದೇಶಗಳಲ್ಲಿ ಕಡಲ್ಕೊರೆತ ಉಂಟಾಗಿದೆ. ಸ್ಥಳಕ್ಕೆ ಶಾಸಕ ಗುರುರಾಜ್‌ ಗಂಟಿಹೊಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಜನಪ್ರತಿನಿಧಿ ಪತ್ರಿಕೆಗೆ ಸ್ಪಂದಿಸಿದ ಶಾಸಕರು, ಕಡಲ್ಕೊರೆತಕ್ಕೆ ಸಂಬಂಧಿಸಿದಂತೆ ಶಾಶ್ವತ ಪರಿಹಾರಕ್ಕೆ ಯೋಜನೆ ರೂಪಿಸಲಾಗಿದೆ. ಅನುದಾನ ಬಿಡುಗಡೆಯಾಗುತ್ತಿಲ್ಲ. ಮೀನುಗಾರಿಕೆ ಸಚಿವರು ಮಂಕಾಳ್‌ ವೈದ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರಲ್ಲಿ ಚರ್ಚೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಜಿಲ್ಲಾಧಿಕಾರಿಗಳಲ್ಲಿಯೂ ಈ ಬಗ್ಗೆ ಪ್ರಸ್ತಾಪ ಮಾಡಿದ್ದೇನೆ. ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಆಗಲೇ ಬೇಕು. ಮನವಿ ಸಲ್ಲಿಸಿಯಾಗಿದೆ. ಚರ್ಚಿಸಿಯೂ ಆಗಿದೆ. ಇನ್ನು ಉಳಿದ ಮಾರ್ಗ ಹೋರಾಟ. ಅನುದಾನ ಬಿಡುಗಡೆಯಾಗದೇ ಇದ್ದಲ್ಲಿ. ಸಚಿವರು ಈ ಬಗ್ಗೆ ಸ್ಪಂದಿಸದಿದ್ದಲ್ಲಿ ಸುದೀರ್ಘ ಹೋರಾಟ ಮಾಡಿ ಇಲಾಖೆಯನ್ನು ಎಚ್ಚರಿಸಿ ಶಾಶ್ವತ ಪರಿಹಾರ ಮಾಡಿಸುತ್ತೇನೆ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!