spot_img
Saturday, February 14, 2026
spot_img

ನಿವೃತ್ತ ಇಂಜಿನಿಯರ್ ಉಪ್ಪುಂದದ ಯು. ಮಂಜುನಾಥ ವೈದ್ಯ ನಿಧನ

ಕುಂದಾಪುರ: ನಿವೃತ್ತ ಮುಖ್ಯ ಇಂಜಿನಿಯರ್ ಉಪ್ಪುಂದದ ಯು. ಮಂಜುನಾಥ ವೈದ್ಯ(86) ಜು. 23 ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

ಇವರು ಭೂಮರೆಡ್ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ತಮ್ಮ ಇಂಜಿನಿಯರಿಂಗ್ ವ್ಯಾಸಂಗವನ್ನು ಮುಗಿಸಿ ಬೈಂದೂರು, ಗುಲ್ಬರ್ಗ, ಧಾರವಾಡ ಕಾರವಾರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೇವೆಯನ್ನು ಸಲ್ಲಿಸಿ ಮುಖ್ಯ ಇಂಜಿನಿಯರ್ ಆಗಿ ಬಡ್ತಿ ಹೊಂದಿ ೧೯೯೭ ಏಪ್ರಿಲ್ ತನಕ ಕೃಷ್ಣ ಮೇಲ್ದಂಡೆ ಯೋಜನೆ ಆಲಮಟ್ಟಿಯಲ್ಲಿ ಸೇವೆ ಸಲ್ಲಿಸಿದ್ದರು.

ಸರಳ ವ್ಯಕ್ತಿಯಾದ ಇವರು ತಾವು ಸೇವೆ ಸಲ್ಲಿಸಿದ ಎಲ್ಲಾ ಕಡೆಯೂ ತಮ್ಮ ಸಹೋದ್ಯೋಗಿಗಳು ಸೇರಿದಂತೆ ಎಲ್ಲರಿಗೂ ಪ್ರೀತಿ ಪಾತ್ರರಾಗಿದ್ದರು. ದಕ್ಷ ಅಧಿಕಾರಿ ಎಂದೇ ಖ್ಯಾತರಾಗಿದ್ದರು. ನಿವೃತ್ತರಾದ ಬಳಿಕ ಲಯನ್ಸ್ ಕ್ಲಬ್ ಬೈಂದೂರು ಇದರ ಅಧ್ಯಕ್ಷರಾಗಿದ್ದರು. ಮಾತ್ರವಲ್ಲದೆ ಕೂಟ ಮಹಾ ಜಗತ್ತು, ಬ್ರಾಹ್ಮಣ ಪರಿಷತ್ತು ಇನ್ನೂ ಮುಂತಾದ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ಹಲವಾರು ವಿದ್ಯಾರ್ಥಿಗಳಿಗೆ ವಿದ್ಯಾ ಕಲಿಕೆಗೆ ಧನ ಸಹಾಯ ಮಾಡುತ್ತಿದ್ದ ಇವರು ತಾವು ಕಲಿತ ಶಾಲೆಗೆ ಕುಡಿಯುವ ನೀರಿನ ಘಟಕವನ್ನು ಕೂಡ ಕೊಡುಗೆಯಾಗಿ ನೀಡಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರಿಯರು, ಇಬ್ಬರು ಪುತ್ರರನ್ನು ಅಗಲಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!