spot_img
Tuesday, March 31, 2026
spot_img

ಗ್ರಾಹಕರ ಸೇವೆಯಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಮುಂಚೂಣಿಯಲ್ಲಿದೆ – ಡಾ. ಎಂ. ಎನ್. ರಾಜೇಂದ್ರಕುಮಾರ್

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 110 ವರ್ಷಗಳ ಇತಿಹಾಸ ಹೊಂದಿದ್ದು, ಪ್ರಸ್ತುತ 113 ಶಾಖೆಗಳ ಮೂಲಕ ಗ್ರಾಹಕರಿಗೆ ಸಮರ್ಪಕ ಹಾಗೂ ಉತ್ಕೃಷ್ಟ ಸೇವೆಯನ್ನು ಒದಗಿಸುವ ಮೂಲಕ ವಾಣಿಜ್ಯ ಬ್ಯಾಂಕ್‌ಗಳಿಗಿಂತ ಮುಂಚೂಣಿಯಲ್ಲಿದೆ ಎಂದು  ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರಕುಮಾರ್ ಹೇಳಿದರು.

ಎಸ್‌ಸಿಡಿಸಿಸಿ ಬ್ಯಾಂಕ್‌ನ ಕೋಡಿಕಲ್ ಸ್ಥಳಾಂತರಿತ ಶಾಖೆಯನ್ನು ನಗರದ ಉರ್ವ ಮಾರಿಗುಡಿ ರಸ್ತೆಯಲ್ಲಿರುವ ‘ಶ್ರೀನಿಧಿ ರಾಮದೇವ್ ರೆಸಿಡೆನ್ಸಿ’ ಕಟ್ಟಡದ ನೆಲ ಅಂತಸ್ತಿನಲ್ಲಿ ಉದ್ಘಾಟಿಸಿ ಸೋಮವಾರ ಅವರು ಮಾತನಾಡಿದರು.
ಬ್ಯಾಂಕ್‌ನಿಂದ ಕೃಷಿಕರು ಪಡೆದ ಸಾಲ ಕಳೆದ 28 ವರ್ಷಗಳಿಂದ ಶೇ.100ರಷ್ಟು ಮರುಪಾವತಿ ಆಗುತ್ತಿದೆ. ಗ್ರಾಮಾಂತರ ಪ್ರದೇಶದ ಮಹಿಳೆಯರ ಸ್ವಾವಲಂಬಿ ಜೀವನಕ್ಕಾಗಿ ನವೋದಯ ಸ್ವಸಹಾಯ ಸಂಘಗಳ ಮೂಲಕ ಸಾಲದ ವ್ಯವಸ್ಥೆ ಮಾಡಿದ್ದು, ಶೇ.99.50ರಷ್ಟು ಮರುಪಾವತಿ ಆಗುತ್ತಿದೆ. ಜಿಲ್ಲೆಯಲ್ಲಿ ಸಾಲ ದೊರೆಯದ ಕಾರಣಕ್ಕೆ ರೈತರು ಆತ್ಮಹತ್ಯೆ ಮಾಡಿಕೊಳ್ಳುವ  ಸ್ಥಿತಿ ಇಲ್ಲ ಎಂದರು.
ಹೊಸ 16 ನವೋದಯ ಸ್ವಸಹಾಯ ಸಂಘಗಳ ರಚನೆ :
2011ರಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ನ 55ನೇ ಶಾಖೆಯಾಗಿ ಕೋಡಿಕಲ್ ಶಾಖೆ ಆರಂಭಗೊಂಡಿತ್ತು. ಜನರ ಅನುಕೂಲಕ್ಕಾಗಿ ಇದೀಗ ಬ್ಯಾಂಕ್ ಶಾಖೆಯನ್ನು ಸ್ಥಳಾಂತರಗೊಳಿಸಲಾಗಿದೆ. ಕೋಡಿಕಲ್ ಶಾಖೆಯಲ್ಲಿ 49 ಕೋಟಿ ರೂ. ಠೇವಣಾತಿ ಇದ್ದು, 92 ಕೋಟಿ ರೂ. ಸಾಲ ನೀಡಲಾಗಿದೆ. ನೂತನ ಸ್ಥಳಾಂತರಿತ ಶಾಖೆಯಲ್ಲಿ ಹೊಸ 16 ನವೋದಯ ಸ್ವಸಹಾಯ ಸಂಘಗಳ ರಚನೆಯಾಗಿದೆ ಎಂದು ಡಾ. ಎಂಎನ್‌ಆರ್ ತಿಳಿಸಿದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸಹಕಾರಿ ಕ್ಷೇತ್ರದಲ್ಲಿ ಎಸ್‌ಸಿಡಿಸಿಸಿ  ಬ್ಯಾಂಕ್ ಬಹಳ ದೊಡ್ಡ ಸಾಧನೆ ಮಾಡಿದೆ. ದೇಶದ ಬೇರೆ ಭಾಗಕ್ಕೆ ಹೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯ ಜನರು ಮಾತ್ರ ಕ್ಲಪ್ತ ಸಮಯದಲ್ಲಿ ಸಾಲ ಮರುಪಾವತಿ ಮಾಡುವ ಮೂಲಕ ಬ್ಯಾಂಕ್ ಅಭಿವೃದ್ಧಿಗೆ ನೆರವು ನೀಡುತ್ತಿದ್ದಾರೆ. ಡಾ. ಎಂ. ಎನ್. ರಾಜೇಂದ್ರಕುಮಾರ್ ಅವರ ದಕ್ಷ ಮಾರ್ಗದರ್ಶನದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಸಹಕಾರ ಬ್ಯಾಂಕಿಂಗ್ ಸೇವೆಯಲ್ಲಿ ಮುಂಚೂಣಿಯಲ್ಲಿದ್ದು, ಜನರಿಂದ ಪ್ರಶಂಸೆಗೊಳಗಾಗಿದೆ ಎಂದು ಸ್ಥಳಾಂತರಿತ ಕೋಡಿಕಲ್ ಶಾಖೆಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿದ್ದ ಸ್ಥಳೀಯ ಕಾರ್ಪೋರೇಟರ್ ಗಣೇಶ್ ಕುಲಾಲ್ ಮಾತನಾಡಿ, ಎಸ್‌ಸಿಡಿಸಿಸಿ ಬ್ಯಾಂಕ್‌ನ ಕೋಡಿಕಲ್ ಶಾಖೆ ಗ್ರಾಹಕರ ಅನುಕೂಲಕ್ಕಾಗಿ ಸ್ಥಳಾಂತರಗೊಂಡಿದೆ. ಜನರು ಇದರ ಸದುಪಯೋಗಪಡೆದುಕೊಂಡು ಬ್ಯಾಂಕ್‌ಗೆ ಸಹಕಾರ ನೀಡಬೇಕು ಎಂದರು.

ಶಾಖಾ ಕಟ್ಟಡದ ಮಾಲಕ ಶಿವಪ್ರಸಾದ್ ಕಟ್ಟ ಮಾತನಾಡಿ, ಎಸ್‌ಸಿಡಿಸಿಸಿ ಬ್ಯಾಂಕ್ ಗ್ರಾಹಕರಿಗೆ ಅನುಕೂಲವಾಗುವ ರೀತಿಯಲ್ಲಿ ಸೌಲಭ್ಯ ಒದಗಿಸಿ, ಕಾರ್ಯಾಚರಿಸುತ್ತಿದೆ. ಸ್ಥಳಾಂತರಿತ ಶಾಖೆಯ ಸುತ್ತಲಿನ ಜನರು ಇಲ್ಲಿ ವ್ಯವಹಾರ ನಡೆಸುವ ಮೂಲಕ ಬ್ಯಾಂಕ್‌ನ್ನು ಬೆಳೆಸಬೇಕು ಎಂದರು.
ಈ ವೇಳೆ ಕಾರ್ಪೋರೇಟರ್ ಗಣೇಶ್ ಕುಲಾಲ್ ಹಾಗೂ  ಶಿವಪ್ರಸಾದ್ ಕಟ್ಟ ಅವರನ್ನು ಸನ್ಮಾನಿಸಲಾಯಿತು. ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಬ್ಯಾಂಕ್ ನಿರ್ದೇಶಕರಾದ ಭಾಸ್ಕರ್ ಎಸ್. ಕೋಟ್ಯಾನ್,  ಶಶಿಕುಮಾರ್ ರೈ ಬಿ., ಎಸ್.ಬಿ. ಜಯರಾಮ ರೈ, ದೇವಿಪ್ರಸಾದ್ ಶೆಟ್ಟಿ ಬೆಳಪು, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಹರಿಶ್ಚಂದ್ರ, ಕೆ. ಜೈರಾಜ್ ಬಿ.ರೈ, ಅಶೋಕ್ ಕುಮಾರ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು. ಶಶಿರಾಜ್ ಕಾವೂರು ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!