spot_img
Thursday, April 2, 2026
spot_img

ತೆಕ್ಕಟ್ಟೆ: ಬಿ. ಎಮ್. ರಾಮಕೃಷ್ಣ ಹತ್ವಾರ್ ಸಂಸ್ಮರಣೆ

ತೆಕ್ಕಟ್ಟೆ: ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಜಗತ್ತಿಗೆ ಬಹು ದೊಡ್ಡ ಕೊಡುಗೆ ಇತ್ತ ಬಿ. ಎಮ್. ರಾಮಕೃಷ್ಣ ಹತ್ವಾರ್‌ರ ಕಾಯ ಅಳಿದು ಕೀರ್ತಿ ಉಳಿದಿದೆ. ಅದೆಷ್ಟೋ ಶಾಲಾ ಕಾಲೇಜುಗಳಲ್ಲಿ, ಕೊಠಡಿಗಳು ಹತ್ವಾರರ ಹೆಸರಿನಲ್ಲಿ ಉಳಿದಿವೆ. ಸಾಂಸ್ಕೃತಿಕವಾಗಿ ತೆಕ್ಕಟ್ಟೆ ಬೆಟ್ಟಿನ ಮನೆಯಲ್ಲಿ ವರ್ಷಂಪ್ರತೀ ಪ್ರಸಿದ್ಧ ಕಲಾವಿದರೂ ಜಮಾಯಿಸಿ, ಅದ್ದೂರಿಯ ತಾಳಮದ್ದಳೆ ಏರ್ಪಡುವಂತೆ ಮಾಡಿದ ಕಲಾ ಪ್ರೇಮಿಗಳು ಹತ್ವಾರರು. ಗತ ಕಾಲದಲ್ಲಿ ತೆಕ್ಕಟ್ಟೆಯಲ್ಲಿ ತಾಳಮದ್ದಳೆಯ ಸಂಘಟಕರಾಗಿ ಹೆಸರಾದ ಹತ್ವಾರರು ಜೀವಿತ ಕಾಲದಲ್ಲಿ ತೆಂಕು ಬಡಗಿನ ಅನೇಕ ಯಕ್ಷಗಾನವನ್ನೂ ಆ ಕಾಲದಲ್ಲಿ ಏರ್ಪಡಿಸಿ ಜನಾನುರಾಗಿಯಾಗಿದ್ದರು. ಇಂತಹ ಹತ್ವಾರರು ಸಮಾಜದ ಎಲ್ಲಾ ವಿಭಾಗದಲ್ಲೂ ತನ್ನ ಕೊಡುಗೆಯನ್ನಿತ್ತು ಸರ್ವ ಶ್ರೇಷ್ಠರಾದರು. ದಾನಿಗಳ ನೆರವನ್ನು ಸಂಘ ಸಂಸ್ಥೆಗಳು ನೆನಪಿಸಿಕೊಳ್ಳಬೇಕಾದದ್ದು ಆದ್ಯ ಕರ್ತವ್ಯ ಎಂದು ಸಿನ್ಸ್ 1999 ಶ್ವೇತಯಾನದ ಉಪ ಕಾರ್ಯಾಧ್ಯಕ್ಷ ಕೊಮೆ ಗೋಪಾಲ ಪೂಜಾರಿ ಸಂಸ್ಮರಣಾ ನುಡಿಗಳನ್ನಾಡಿದರು.

ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವೀ ಕಲಾವೃಂದ (ರಿ.)ಕೊಮೆ, ತೆಕ್ಕಟ್ಟೆ ಸಂಸ್ಥೆಯ ಸಿನ್ಸ್ 1999 ಶ್ವೇತಯಾನ-45 ಕಾರ್ಯಕ್ರಮದಡಿಯಲ್ಲಿ ರೋಟರಿ ಕ್ಲಬ್ ತೆಕ್ಕಟ್ಟೆ ಸಹಯೋಗದೊಂದಿಗೆ ಆಗಷ್ಟ್ 4ರಂದು ಬಿ. ಎಮ್. ರಾಮಕೃಷ್ಣ ಹತ್ವಾರ್ ಸಂಸ್ಮರಣೆಯಲ್ಲಿ ಗೋಪಾಲ ಪೂಜಾರಿ ಮಾತನ್ನಾಡಿದರು.

ಹತ್ವಾರ್ ಸಹೋದರ ಬೆಟ್ಟಿನ ಮನೆ ವಾದಿರಾಜ ಹತ್ವಾರ್, ರೋಟರಿ ಅಧ್ಯಕ್ಷ ಗಣಪತಿ ಟಿ. ಶ್ರೀಯಾನ್, ಉಪನ್ಯಾಸಕ ಮೋಹನಚಂದ್ರ ಪಂಜಿಗಾರು, ಯಶಸ್ವೀ ಕಲಾ ವೃಂದದ ಅಧ್ಯಕ್ಷ ಮಲ್ಯಾಡಿ ಸೀತಾರಾಮ ಶೆಟ್ಟಿ ಉಪಸ್ಥಿತರಿದ್ದರು. ಹೆರಿಯ ಮಾಸ್ಟರ್ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಕೇಂದ್ರದ 24 ವಿದ್ಯಾರ್ಥಿಗಳು ಶ್ವೇತಕುಮಾರ ಚರಿತ್ರೆ ಯಕ್ಷಗಾನ ಪ್ರಸಂಗವನ್ನು ಗಾನ ತಾಳಮದ್ದಳೆಯಾಗಿ ರಂಗದಲ್ಲಿ ಪ್ರದರ್ಶಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!