spot_img
Tuesday, March 31, 2026
spot_img

ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್: ಇನ್ಸ್‌ಪೈಯರ್ ತರಬೇತಿ ಕಾರ್ಯಾಗಾರ

ಕುಂದಾಪುರ: ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆಯಲ್ಲಿ 6ನೇ ತರಗತಿಯಿಂದ ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ಇನ್ಸ್‌ಪೈಯರ್ ಸ್ಪರ್ಧೆಗಳಿಗೆ ಮಾದರಿಗಳನ್ನು ತಯಾರಿಸುವ ಕುರಿತು ತರಬೇತಿ ಕಾರ್‍ಯಾಗಾರವನ್ನು ಆಯೋಜಿಸಲಾಗಿತ್ತು.

ಕಾರ್‍ಯಕ್ರಮದ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಸುರೇಶ್ ಮರಕಾಲರವರು ಮಕ್ಕಳು ಹಾಗೂ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದರು. ಇನ್ಸ್‌ಪೈಯರ್ ಅವಾರ್ಡ್ ಗಳಿಸಲು ತಯಾರಿಸ ಬಹುದಾದ ಮಾದರಿಗಳ ಕುರಿತು ಮಾಹಿತಿ ನೀಡಿದರು. ದೈನಂದಿನ ಜೀವನದಲ್ಲಿ ಮಾಡುವ ವಿವಿಧ ಕೆಲಸ ಕಾರ್‍ಯಗಳನ್ನು ಸುಲಭದ ವಿಧಾನದಲ್ಲಿ ಮಾಡಲು ಸಹಕಾರಿಯಾಗುವ ಮಾದರಿಗಳನ್ನು ತಯಾರಿಸಿದಲ್ಲಿ ಅಂತಹ ಮಾದರಿಗಳು ಬಹುಮಾನ ಗಳಿಸಿ ಪ್ರೋತ್ಸಾಹ ಸಿಗುವುದಾಗಿ ತಿಳಿಸಿದರು. ವಿವಿಧ ವಿಜ್ಞಾನ ಮಾದರಿಗಳನ್ನು ಮಾಡುವ ಸರಳ ವಿಧಾನಗಳ ಕುರಿತು ಮಕ್ಕಳಿಗೆ ತಿಳಿಸಿದರು.

ಕಾರ್‍ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ, ಅಕಾಡೆಮಿಕ್ ಡೈರೆಕ್ಟರ್ ದಿವಾಕರ ಶೆಟ್ಟಿ ಹೆಚ್., ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾಥಿಗಳಾದ ರಶ್ವತ್ ಸ್ವಾಗತಿಸಿದರು, ಬಿಂದುಶ್ರೀ ವಂದಿಸಿದರು ಹಾಗೂ ಹರ್ಷಿಣಿ ಕಾರ್‍ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!