spot_img
Sunday, February 15, 2026
spot_img

ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ : “ಚೈತನ್ಯ ಚಿಲುಮೆ” ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

ಜನಪ್ರತಿನಿಧಿ (ಮೂಡ್ಲಕಟ್ಟೆ) : ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ೯ನೇ ದಿನದ ದೀಕ್ಷಾರಂಭ ಕಾರ್ಯಕ್ರಮದ ಅಡಿಯಲ್ಲಿ “ಚೈತನ್ಯ ಚಿಲುಮೆ” ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ನಡೆಯಿತು.

ಕಾಲೇಜಿನ ವಿವಿಧ ಸಂಘಗಳನ್ನು ಉದ್ಘಾಟಿಸಿದ ಪತ್ರಕರ್ತ ಜಾನ್ ಡಿಸೋಜಾ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಸಂಸ್ಥೆಯ ಸ್ಥಾಪಕರಾದ ಐ.ಎಂ ಜಯರಾಮ್ ಶೆಟ್ಟರ ಕ್ರಿಯಾಶೀಲವಾದ ಚಟುವಟಿಕೆ ಮತ್ತು ಚೈತನ್ಯ ಶೀಲತೆಯನ್ನು ಸಂಸ್ಥೆಯು ಅನುಸರಿಸುತ್ತಿರುವುದು ಶ್ಲಾಘನೀಯವಾದದ್ದು, ಕೇವಲ ಶಿಕ್ಷಣದಿಂದ ವ್ಯಕ್ತಿತ್ವ ಬೆಳೆಯುವುದಿಲ್ಲ ಅದಕ್ಕೆ ಸಾಂಸ್ಕೃತಿಕ ಮತ್ತು ನೈಸರ್ಗಿಕ ಹಿನ್ನೆಲೆ ಬೇಕು, ಮಾನವೀಯತೆಯ ಭಾವನೆ ಬೇಕು ಆಗ ಮಾತ್ರ ಪರಿಪೂರ್ಣ ವ್ಯಕ್ತಿತ್ವವನ್ನು  ಬೆಳೆಸಿಕೊಳ್ಳಲು ಸಾಧ್ಯ. ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತನ್ನ ಬದುಕನ್ನ ಕಟ್ಟಿಕೊಳ್ಳಬಹುದು, ಆಂತರಿಕ ಶಕ್ತಿಯನ್ನು ಚಿಲುಮೆಯ ರೂಪದಲ್ಲಿ ಹೊರ ತಂದಾಗ ಪ್ರತಿಯೊಬ್ಬರಲ್ಲಿರುವ ಅದ್ಭುತವಾದ ಚೈತನ್ಯ ಹೊರಹೊಮ್ಮುತ್ತದೆ ಜೊತೆಗೆ ನಿಸರ್ಗದೊಂದಿಗೆ ಬದುಕುವ ಮೂಲಕ ಅದ್ಭುತ ಪಾಠವನ್ನು ಕಲಿಯಲು ಈ ರೀತಿಯ ವಿವಿಧ ಸಂಘಗಳು ಬೆನ್ನೆಲುಬಾಗಿರುತ್ತದೆ ಎಂದು ಹೇಳಿದರು.

ಉಪ ಪ್ರಾಂಶುಪಾಲರಾದ ಜಯಶೀಲ ಕುಮಾರ್ ವಿವಿಧ ವೇದಿಕೆಯ ಕಾರ್ಯದರ್ಶಿ ಮತ್ತು ಜೊತೆ ಕಾರ್ಯದರ್ಶಿಗಳನ್ನು ಸಭೆಗೆ ಪರಿಚಯಿಸಿದರು ಮತ್ತು ಅದರ ಲೋಗೋಗಳನ್ನು ಬಿಡುಗಡೆ ಮಾಡಿದರು.

ಪ್ರಾಂಶುಪಾಲರಾದ ಡಾ. ಪ್ರತಿಭಾ ಪಾಟೇಲ್ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಐಎಂಜೆ ಬ್ರ‍್ಯಾಂಡ್ ಬಿಲ್ಡಿಂಗ್ ನ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗ್ಡೆ , ವಿದ್ಯಾರ್ಥಿಗಳು ಶಿಸ್ತಿನ ಚಟುವಟಿಕೆಗಳಿಗೆ ಒಳಗಾದಾಗ ಯಶಸ್ವಿ ವ್ಯಕ್ತಿಗಳಾಗಿ ಹೊರಹೊಮ್ಮುತ್ತಾರೆ ಅದನ್ನು ನಮ್ಮ ಸಂಸ್ಥೆ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಪ್ರತಿಭಾ ಪಟೇಲ್  ವಹಿಸಿದ್ದರು. ತೃತೀಯ ಬಿಸಿಎ ನ  ಕು. ನಯನ ಮತ್ತು ಕು. ಚೇತನ ಪ್ರಾರ್ಥನೆ ಗೈದರು, ದ್ವಿತೀಯ ಬಿಸಿಎ ನ ಕು.ರಶಿತಾ ಸ್ವಾಗತಿಸಿದರು, ದ್ವಿತೀಯ ಬಿಸಿಎ ನ ಕು. ಸಿಂಚನ ವಂದಿಸಿದರು, ತೃತೀಯ ಬಿಕಾಂ ನ ಕು.ಸಭಾ ಕಾರ್ಯಕ್ರಮವನ್ನು ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!