spot_img
Friday, March 21, 2025
spot_img

ಕೆಂಚನೂರು: ಮರ ಬಿದ್ದು ಮಹಿಳೆ ಸಾವು

ಕುಂದಾಪುರ: ಆ.25 ರವಿವಾರ ಸಂಜೆ ಬೀಸಿದ ಭಾರೀ ಗಾಳಿಗೆ ಮರ ಬಿದ್ದ ಪರಿಣಾಮ ರಸ್ತೆ ಬದಿಯಲ್ಲಿ ಕಟ್ಟಿದ್ದ ದನ ಹಾಗೂ ಅದನ್ನು ಬಿಡಿಸಲು ಹೋಗಿದ್ದ ಮಹಿಳೆ, ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಕೆಂಚನೂರು ನೀರಿನ ಟ್ಯಾಂಕ್ ಬಳಿ ನಡೆದಿದೆ.

ಕೆಂಚನೂರು ಗ್ರಾಮದ ಮಲ್ಲಾರಿ ನಿವಾಸಿ ಅಣ್ಣಪ್ಪಯ್ಯ ಆಚಾರ್ ಎಂಬುವರ ಪತ್ನಿ ಸುಜಾತ ಆಚಾರ್ (53) ಸಾವನ್ನಪ್ಪಿದವರು. ಅಲ್ಲದೆ ಅದೆ ಸಂದರ್ಭ ಅವರ ಮನೆಯ ಹಾಲು ಕರೆಯುವ ಹಸು ಕೂಡ ಸಾವನ್ನಪ್ಪಿದೆ.

ಸುಜಾತಾ ಆಚಾರ್ ತಮ್ಮ ಮನೆಯ ಹಾಲು ಕರೆಯುವ ಹಸುವನ್ನು ಮನೆ ಸಮೀಪದ ರಸ್ತೆ ಬದಿಯಲ್ಲಿ ಭಾನುವಾರ ಸಂಜೆ ಮೇಯಲೆಂದು ಕಟ್ಟಿದ್ದರು. ವಿಪರೀತ ಗಾಳಿ ಮಳೆ ಬೀಸುತ್ತಿರುವ ಹಿನ್ನೆಲೆಯಲ್ಲಿ ಸಂಜೆ ಸುಮಾರು ೫.೩೦ಕ್ಕೆ ದನವನ್ನು ಬಿಡಿಸಿ ಕೊಟ್ಟಿಗೆಗೆ ತರಲೆಂದು ಹೋಗಿದ್ದರು. ಇದೇ ಸಂದರ್ಭ ಗಾಳಿಗೆ ಮರ ಮೇಯುತ್ತಿದ್ದ ದನ ಮತ್ತು ಸುಜಾತ ಆಚಾರ್ ಅವರ ಮೇಲೆ ಬಿದ್ದಿದೆ. ಮರ ಬಿದ್ದ ಪರಿಣಾಮ ದನ ಸ್ಥಳದಲ್ಲಿಯೇ ಸಾವನ್ನಪ್ಪಿದೆ ಹಾಗೂ ಸುಜಾತ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು ಅಲ್ಲಿ ಸುಜಾತ ಸಾವನ್ನಪ್ಪಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ.  ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!