Tuesday, September 17, 2024

ಗೃಹಲಕ್ಷ್ಮೀ ಯೋಜನೆ : 1.25 ಕೋಟಿ ಗೃಹಲಕ್ಷ್ಮಿಯರು ಆರ್ಥಿಕ ಸ್ವಾವಲಂಬಿಗಳಾಗಿದ್ದಾರೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ನಾಡಿನ ಕೋಟ್ಯಂತರ ಮನೆಯೊಡತಿಯರ ಕುಟುಂಬ ನಿರ್ವಹಣೆಯ ಭಾರವನ್ನು ಗೃಹಲಕ್ಷ್ಮಿಯ ಮೂಲಕ ನಮ್ಮ ಹೆಗಲಿಗೇರಿಕೊಂಡು ವರ್ಷ ಪೂರೈಸಿದೆ. ಇದರಿಂದ 1.25 ಕೋಟಿ ಗೃಹಲಕ್ಷ್ಮಿಯರು ಆರ್ಥಿಕ ಸ್ವಾವಲಂಬಿಗಳಾಗಿ ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಯೋಜನೆ ಜಾರಿಗೊಂಡ ನಂತರದಿಂದ ಈ ವರೆಗೆ ರೂ.25,000 ಕೋಟಿ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಿದ್ದೇವೆ. ಜಾಗತಿಕ ಮೂಲ ಆದಾಯ ಪರಿಕಲ್ಪನೆಯಡಿ ಜಾರಿಗೆ ಕೊಟ್ಟಿರುವ ಈ ಯೋಜನೆ ಇಂದು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ ಎಂದವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!