spot_img
Monday, March 24, 2025
spot_img

ಉತ್ತಮ ಪ್ರಾಂಶುಪಾಲರ ಪ್ರಶಸ್ತಿಗೆ ತಾತ್ಕಾಲಿಕ ತಡೆ: ಬಿಜೆಪಿ ಕುಂದಾಪುರ ಮಂಡಲ ಖಂಡನೆ

ಕುಂದಾಪುರ: ಶಿಕ್ಷಕರ ದಿನಾಚರಣೆಯ ಸುಸಂದರ್ಭದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಮಟ್ಟದ ಉತ್ತಮ ಪ್ರಾಂಶುಪಾಲರ ಪ್ರಶಸ್ತಿಗೆ ಆಯ್ಕೆಯಾದ ಕುಂದಾಪುರದ ಜ್ಯೂನಿಯರ್ ಕಾಲೇಜು ಪ್ರಾಂಶುಪಾಲರಿಗೆ ಪ್ರಶಸ್ತಿ ನೀಡುವ ವಿಷಯದಲ್ಲಿ ತಾತ್ಕಾಲಿಕ ತಡೆ ನೀಡಿರುವ ರಾಜ್ಯ ಸರ್ಕಾರದ ನಡೆಯನ್ನು ಬಿಜೆಪಿ ಕುಂದಾಪುರ ಮಂಡಲ ಅತ್ಯಂತ ಕಟುವಾಗಿ ಖಂಡಿಸಿದೆ.

ಎಲ್ಲಾ ಅರ್ಹತೆಯನ್ನು ಗಮನಿಸಿ ಶಿಕ್ಷಣ ಇಲಾಖೆ ಆಯ್ಕೆ ಮಾಡಿದೆ. ಶಿಕ್ಷಣ ವಿಷಯದಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು. ಇದು ಶಿಕ್ಷಣ ಇಲಾಖೆ ಮತ್ತು ದೇಶದಾದ್ಯಂತ ಇರುವ ಶಿಕ್ಷಕರಿಗೆ ಮಾಡಿದ ಅವಮಾನ. ರಾಜ್ಯ ಸರ್ಕಾರ ಈ ಕೂಡಲೇ ತಾತ್ಕಾಲಿಕ ತಡೆಯನ್ನು ತೆಗೆದು ಹಾಕಿ ಈ ಹಿಂದೆ ಆಯ್ಕೆಯಾದ ಗೌರವಾನ್ವಿತ ಶಿಕ್ಷಕರಿಗೆ ಪ್ರಶಸ್ತಿ ನೀಡಬೇಕು ಎಂದು ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!