Tuesday, September 17, 2024

ಅಂಪಾರು ನಿವೃತ್ತ ಮುಖ್ಯ ಶಿಕ್ಷಕರಿಗೆ ಸನ್ಮಾನ

ಕುಂದಾಪುರ: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಸಪ್ಟೆಂಬರ್ 5 ರ ಶಿಕ್ಷಕರ ದಿನಾಚರಣೆಯ ಅಂಗವಾಗಿ ಅಂಪಾರಿನ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಹೇರೂರು ದೊಡ್ಡಮನೆ ಎಚ್‌ ಬಿ ಬಾಬಯ್ಯ ಶೆಟ್ಟಿ ಅವರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ವಕ್ವಾಡಿ ಭಾಸ್ಕರ್ ಶೆಟ್ಟಿ ವಹಿಸಿದ್ದರು. ಗೌರವಾಧ್ಯಕ್ಷರಾದ ಶ್ರೀ ವಕ್ವಾಡಿ ದಿನಕರ್ ಶೆಟ್ಟಿ, ಸಂಘದ ಕಾರ್ಯದರ್ಶಿ ಪದ್ಮನಾಭ ಅಡಿಗ, ಖಜಾಂಚಿ ಶಂಕರ್ ಪೂಜಾರಿ, ಸದಸ್ಯರಾದ ಕೆ ಸದಾಶಿವ ಶೆಟ್ಟಿ, ವಸಂತ ಹೆಗ್ಡೆ, ಕೆ.ರಘುವೀರ, ಕೊರಗಯ್ಯ ಶೆಟ್ಟಿ, ಕೆ ರಘು ಶೆಟ್ಟಿ ಹಾಗೂ ಬಾಬಯ್ಯ ಶೆಟ್ಟಿಯವರ ಧರ್ಮಪತ್ನಿ ಶ್ರೀಮತಿ ಶಾರದಾ ಬಿ ಶೆಟ್ಟಿ, ಸೊಸೆ ಚೈತ್ರ ಪಿ.ಶೆಟ್ಟಿ ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!