Tuesday, October 22, 2024

ಮೂಡಹಡು: ಹೊಳೆ ದಂಡೆ ಎತ್ತರವಾಗಿ ನಿರ್ಮಿಸುವಂತೆ ಅಧಿಕಾರಿಗಳಿಗೆ ಶಾಸಕ ಕಿರಣ್ ಕೊಡ್ಗಿ ಸೂಚನೆ

ಸಾಲಿಗ್ರಾಮ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಂಡೇಶ್ವರ ಮೂಡಹಡು ಅಣೆಕಟ್ಟು ವೀಕ್ಷಣೆ ಹಾಗೂ ಪಾಂಡೇಶ್ವರ ಮೂಡಹಡು ಗ್ರಾಮಗಳಿಗೆ ಅದರಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಇಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಅವರೊಂದಿಗೆ ಚರ್ಚಿಸಿ ಸಭೆ ನಡೆಸಿ ಗ್ರಾಮಸ್ಥರ ಬೇಡಿಕೆಯಂತೆ ಹೊಳೆಯ ದಂಡೆಯನ್ನು ಎತ್ತರವಾಗಿ ನಿರ್ಮಿಸಿ ಕೃಷಿ ಭೂಮಿ ಹಾನಿಗೊಳ್ಳದಂತೆ ತಡೆಗೋಡೆ ನಿರ್ಮಿಸುವಂತೆ ಹಾಗೆ ಅದರ ಬಗ್ಗೆ ಸರ್ವೆ ನಡೆಸಿ ಶೀಘ್ರ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿ ಕೃಷಿ ಭೂಮಿ ಹಾನಿಗೊಳ್ಳದಂತೆ ತಡೆಗೋಡೆ ನಿರ್ಮಿಸುವ ಬಗ್ಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪಾಂಡೇಶ್ವರ ಗ್ರಾಮ ಪಂಚಾಯಿತಿನ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇಂಜಿನಿಯರ್ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!