Saturday, September 21, 2024

ಮುಖ್ಯಮಂತ್ರಿ ಪ್ರತಿಕೃತಿ ದಹನ, ಅವಮಾನ : ಯಶಪಾಲ್‌ ಸುವರ್ಣ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲು !

ಜನಪ್ರತಿನಿಧಿ (ಉಡುಪಿ) : ಕುಂದಾಪುರದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ. ಜಿ ರಾಮಕೃಷ್ಣ ಉತ್ತಮ ಶಿಕ್ಷಕ ಪ್ರಶಸ್ತಿ ತಡೆಹಿಡಿದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ನಿಲುವಿನ ವಿರುದ್ಧ ಮಣಿಪಾಲದಲ್ಲಿ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ಸಂದರ್ಭಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಿ ಅವಮಾನ ಮಾಡಿರುವ ಆರೋಪದ ಮೇಲೆ ಉಡುಪಿ ಶಾಸಕ ಯಶಪಾಲ್‌ ಸುವರ್ಣ ಸೇರಿ ಒಟ್ಟ ಬಿಜೆಪಿ ೧೧ ಕಾರ್ಯಕರ್ತರ ಮೇಲೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಬಂಧಿಸಿದಂತೆ ಕಾಂಗ್ರೆಸ್‌ ಮುಖಂಡ ಸೌರವ್‌ ಬಲ್ಲಾಳ್‌ ದೂರು ನೀಡಿದ್ದು, ಪ್ರತಿಭಟನೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುನ್ನು ಅವಮಾನಿಸಿದ್ದಾರೆ ಎಂದು ಅವರು ದೂರು ನೀಡಿದ್ದಾರೆ.

ಈ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಉಡುಪಿ ಶಾಸಕ ಯಶಪಾಲ್‌ ಸುವರ್ಣ, ನನ್ನ ಕಾರ್ಯಕರ್ತರ ಮೇಲೆ ನೂರು ಪ್ರಕರಣ ದಾಖಲಿಸಿದರೂ ಧೃತಿಗೆಡುವುದಿಲ್ಲ ಎಂದು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!