spot_img
Tuesday, March 31, 2026
spot_img

ಆಸ್ಕರ್ ಫೆರ್ನಾಂಡೀಸ್ ಓರ್ವ ಸರಳ ದೂರದೃಷ್ಟಿಯ ನಾಯಕ-ಜಯಕರ ಶೆಟ್ಟಿ

ಕುಂದಾಪುರ, ಸೆ.13: ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಆಸ್ಕರ್ ಫೆರ್ನಾಂಡೀಸ್ ಅವರ ಮೂರನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಯಕರ ಶೆಟ್ಟಿಯವರು ಮಾತನಾಡಿ, ಆಸ್ಕರ್ ಫೆರ್ನಾಂಡೀಸ್ ಕೇಂದ್ರದಲ್ಲಿ ಪ್ರಭಾವಿ ನಾಯಕರಾಗಿದ್ದರು. ತಮ್ಮ ಸರಳ ವ್ಯಕ್ತಿತ್ವದಿಂದ ಜನಸಾಮಾನ್ಯರ ಅಗತ್ಯಗಳನ್ನು ಸ್ಪಂದಿಸುತ್ತಿದ್ದರು. ರೆಡ್ ಕ್ರಾಸ್ ಸಂಸ್ಥೆ ಕುಂದಾಪುರದಲ್ಲಿ ಪ್ರಾರಂಭಿಸುವಾಗ ಕೇಂದ್ರ ಸರ್ಕಾರದಿಂದ ಅನುದಾನವನ್ನು ನೀಡಿ ಪ್ರೋತ್ಸಾಹಿಸಿದ್ದು ಸ್ಮರಣೀಯವೆಂದರು.

ಅನೇಕ ಬಾರಿ ಮುಖ್ಯಮಂತ್ರಿ ಸ್ಥಾನ ದೊರಕುವ ಅವಕಾಶವಿದ್ದರೂ ನಿರಾಕರಿಸಿದ ಆಸ್ಕರ್ ಕರಾವಳಿ ಭಾಗದ ಅಭಿವೃದ್ಧಿಗೆ ಶ್ರಮಿಸಿದರು ಎಂದು ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಕೆದೂರು ಸದಾನಂದ ಶೆಟ್ಟಿ ಹೇಳಿದರು.

ಪಕ್ಷದ ಪ್ರಮುಖರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಪಿ.ಎಲ್.ಡಿ ಬ್ಯಾಂಕಿನ ಅಧ್ಯಕ್ಷರಾದ ಶಿವರಾಮ ಶೆಟ್ಟಿ , ವಿಕಾಸ್ ಹೆಗ್ಡೆ ಆಸ್ಕರ್ ಫೆರ್ನಾಂಡೀಸ್ ಅವರ ರಾಜಕೀಯ ಜೀವನ ನಮಗೆಲ್ಲ ಮಾರ್ಗದರ್ಶಿ ಎಂದು ನೆನಪಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ದೇವಕಿ ಸಣ್ಣಯ್ಯ, ಪುರಸಭೆ ಸದಸ್ಯರಾದ ಶ್ರೀಧರ ಶೇರಿಗಾರ್ ,ಪಂಚಾಯತ್ ಸದಸ್ಯರಾದ ಜಾನಕಿ ಬಿಲ್ಲವ, ವಿಜಯದರ್ ಕೆ ವಿ , ಗಣಪತಿ ಶೆಟ್, ರೋಷನ್ ಬರೆಟ್ಟೊ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಚ್ಚಿತಾರ್ಥ ಶೆಟ್ಟಿ ,ಇಂಟೆಕ್ ಅಧ್ಯಕ್ಷರಾದ ಚಂದ್ರ ಅಮೀನ್, ಗ್ಯಾರೆಂಟಿ ಅನುಷ್ಠಾನ ತಾಲೂಕು ಸಮಿತಿಯ ಸದಸ್ಯರಾದ ಅಭಿಜಿತ್ ಪೂಜಾರಿ , ಆಶಾ ಕರ್ವಾಲ್ಲೊ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರೇವತಿ ಶೆಟ್ಟಿ, ರಾಜ್ಯ ಐಟಿ ಸೆಲ್ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಸದಾನಂದ ಖಾರ್ವಿ, ಅಶೋಕ್ ಸುವರ್ಣ, ಕೇಶವ್ ಭಟ್, ರಕ್ಷಿತ್ ಶೆಟ್ಟಿ ,ಶೋಭಾ ಸಚ್ಚಿದಾನಂದ, ರಿಯಾಜ್ ಕೋಡಿ, ದಿನೇಶ್ ಬೆಟ್ಟ, ಲಕ್ಷ್ಮಣ ಬರೆಕಟ್ಟು ,ಜೋಸೆಫ್ ರೆಬೆಲ್ಲೊ, ವೇಣುಗೋಪಾಲ, ಮೇಬಲ್ ಡಿಸೋಜಾ, ಶಶಿಧರ, ಕೆಎಸ್ ವಿಜಯ, ಪ್ರೀತಮ್ ಕರ್ವಾಲ್ಲೊ , ದಿನೇಶ್ ಮೊಗವೀರ, ಜೂಲಿಯೆಟ್ ಪಾಯ್ಸ್ ,ಸಂಗೀತ ಇನ್ನಿತರರು ಉಪಸ್ಥಿತರಿದ್ದರು.

 ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೊ ಸ್ವಾಗತಿಸಿ, ನಿರೂಪಿಸಿದರು. ನಗರ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಶೆರೀಗಾರ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!