spot_img
Tuesday, March 31, 2026
spot_img

ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಇವರ ವತಿಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ


ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಇವರ ವತಿಯಿಂದ, ಇನ್ನರ್ ವಿಲ್ ತುಂದಾಪುರ ದಕ್ಷಿಣ. ರೋಟರಿ ಸಮುದಾಯ ದಳ ತಲ್ಲೂರು, ಪ್ರಾಥಮಿಕ ಅರೋಗ್ಯ ಕೇಂದ್ರ ಗಂಗೊಳ್ಳಿ ಕಥೋಲಿಕ್ ಸಭಾ ತಲ್ಲೂರು ಘಟಕ ಹಾಗೂ ಆರೋಗ್ಯ ಆಯೋಗ ತಲ್ಲೂರು ಚರ್ಚ್ ಇವರ ಅಶ್ರಯದಲ್ಲಿ, ಮಂಗಳೂರಿನ ಪ್ರಸಿದ್ಧ ಜುಲೇಖಾ ಯೆನೆಪೊಯ ಇನ್ಸಿಟ್ಯೂಟ್ ಆಫ್ ಒಂಕೋಲಜಿ ಆಸ್ಪತ್ರೆಯ ನುರಿತ ಅನುಭವಿ ವೈದ್ಯರಿಂದ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ತಲ್ಲೂರು ಇಗರ್ಜಿಯ ಸಭಾಂಗಣದಲ್ಲಿ ಸೆ.೧೪ರಂದು ನಡೆಸಲಾಯಿತು.

ಚಿನ್ನಯಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಉಮೇಶ್ ಪುತ್ರನ್, ಕಾರ್ಯಕ್ರಮವನ್ನು ಉದ್ಘಾಟಿಸಿ “ಇಂದು ನಮ್ಮ ಭಾರತ 3 ವಿಷಯಗಳಲ್ಲಿ ಪ್ರಥಮ ಸ್ಥಾನ ಪಡೆದಿದೆ, ಇದು ಉತ್ತಮ ವಿಚಾರಗಳಲ್ಲಿ ಅಲ್ಲ, ಒಂದು ಅಪಘಾತದಲ್ಲಿ ಸಾವನ್ನಪ್ಪುವವರ ಸಂಖ್ಯೆಯಲ್ಲಿ, ಇನ್ನೊಂದು ಮಧುಮೇಹ, ಮತ್ತೊಂದು ಕ್ಯಾನ್ಸರ್ ಈ ವಿಷಯಗಳಿಗೆ ಭಾರತದ ರಾಜಧಾನಿಗಳಾಗಿವೆ, ಇದೆಲ್ಲ ನಮ್ಮ ಉಪೇಕ್ಷೆಯ ಫಲ, ನಾವು ತಪಾಸಣೆಗೆ ಹಿಂಜರಿಯುತ್ತೇವೆ, ನಮಗೇನು ಇಲ್ಲಪ್ಪ ಅಂದು ಸುಮ್ಮನಾಗುತ್ತೇವೆ, ಕ್ಯಾನ್ಸರ್ ಕಾಯಿಲೆ ಮೊದಲೇ ಆರಂಭವಾಗಿದ್ದರೂ ನಮ್ಮ ಗೋಚರಕ್ಕೆ ಬರುವುದಿಲ್ಲ, ಅದು ನಮ್ಮ ದೇಹದಲ್ಲಿ ನಿಗೂಢವಾಗಿ ಬಹಳ ಹಿಂದಿನಿಂದಲೂ, ನಂತರ ಬಾಧಿಸಬಹುದು, ಈ ಗಡ್ಡೆಗಳು ಬೆಳೆಯಲು ಸಾಕಷ್ಟು ವರ್ಷಗಳು ತೆಗೆದುಕೊಳ್ಳುತ್ತವೆ, ಆದರಿಂದ ನಾವು ಮೊದಲೇ ತಪಾಸಣೆ ಮಾಡಿಕೊಂಡರೆ, ಹೆಚ್ಚಿನ ರೀತಿಯಲ್ಲಿ ಆಗಬಹುದಾದ ಅನಾಹುತಗಳನ್ನು ತಪ್ಪಿಸಬಹುದಾಗಿದೆ, ಹೆಂಗಸರಿಗೆ ಸ್ಥನ ಕ್ಯಾನ್ಸರ್, ಗರ್ಭಕೋಶದ ಕ್ಯಾನ್ಸರ್ ಮತ್ತು ಗಂಡಸರಿಗೆ ಬಾಯಿ ಕ್ಯಾನ್ಸರ್ ಹೆಚ್ಚಾಗಿ ಭಾದಿಸುತ್ತದೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾದ ಡಾ. ಉತ್ತಮ್ ಕುಮಾರ್ ಶೆಟ್ಟಿ ಇವರು ಮಾತನಾಡಿ ‘ರೋಗ ಬಂದು ಚಿಕಿತ್ಸೆ ಮಾಡಿಕೊಳ್ಳುವುದಕ್ಕಿಂತ ರೋಗ ಬಾರದ ರೀತಿ ಜೀವಿಸುವುದು ಉತ್ತಮ, ಕ್ಯಾನ್ಸರ್ ತಪಾಸಣಾ ಶಿಬಿರ ಒಂದು ಉತ್ತಮ ಕಾರ್ಯಕ್ರಮ ಒಂದು ವೇಳೆ ಕ್ಯಾನ್ಸರ್ ಬರುವ ಸಂದರ್ಭ ಹಾಗೂ ಕ್ಯಾನ್ಸರ್ ಆರಂಭ ಹಂತದಲ್ಲಿದೆ ಇದೆ ಎಂದು ತಿಳಿದರೆ ಅದನ್ನು ವಾಸಿ ಮಾಡಬಹುದು, ಅದಕ್ಕಾಗಿ ಇಂತಹ ಶಿಬಿರಗಳ ಅಗತ್ಯವಿದೆ’ ಎಂದು ತಿಳಿಸಿದರು.

ತಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಿರೀಶ್ ಎಸ್. ನಾಯಕ್ ‘ಇದೊಂದು ವಿಶೇಷ ಕಾರ್ಯಕ್ರಮ, ರಕ್ತದಾನ, ಅನ್ನದಾನ ಇಂತಹದೆಲ್ಲ ನಾವು ಮಾಡಬಹುದು, ಆದರೆ ಆರೋಗ್ಯ ದಾನ ಮಾಡಲಿಕ್ಕೆ ಆಗುವುದಿಲ್ಲ, ಆದರೆ ಆದರೆ ಆರೋಗ್ಯ ಸುಧಾರಿಸಿಕೊಳ್ಳಲು ಸಹಾಯ ಮಾಡಬಹುದು ಈ ಕಾರ್ಯಕ್ರಮ ಅಂತಹುದಾಗಿದೆ, ಇದನ್ನು ಹಮ್ಮಿಕೊಂಡ ರೋಟರಿ ಅಧ್ಯಕ್ಷರಿಗೆ ಮತ್ತು ಸಹಕಾರ ನೀಡಿದವರಿಗೆ ಶ್ಲಾಘಿಸಿದರು.

ಜುಲೇಖಾ ಯೆನೆಪೋಯ ಇನ್ಸಿಟ್ಯೂಟ್ ಆಫ್ ಒಂಕೋಲಜಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಎಸ್. ನೇಹ ಕಾರಂತ್ ಮಾತನಾಡಿದರು. ವೇದಿಕೆಯಲ್ಲಿ ಡಾ. ರಾಜೇಂದ್ರ ಶೆಟ್ಟಿ, ತಲ್ಲೂರು ಚರ್ಚಿನ ಪಾಲನ ಮಂಡಳಿ ಉಪಾಧ್ಯಕ್ಷರಾದ ಕೆಲ್ವಿನ್ ಮೆಂಡೊನ್ಸಾ ಮತ್ತು ಇತರರು ಉಪಸ್ಥಿತರಿದ್ದರು. ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಇದರ ಅಧ್ಯಕ್ಷೆ ಜೂಡಿತ್ ಮೆಂಡೊನ್ಸಾ ಪ್ರಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಸುರೇಖ ಪುರಾಣಿಕ್ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!