spot_img
Wednesday, April 1, 2026
spot_img

ಬಾಲ್ ಬ್ಯಾಡ್ಮಿಂಟನ್ : ಗಂಗೊಳ್ಳಿ ಸರಸ್ವತಿ ವಿದ್ಯಾಲಯಕ್ಕೆ ಅವಳಿ ದ್ವಿತೀಯ ಪ್ರಶಸ್ತಿ

ಗಂಗೊಳ್ಳಿ:ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ  ವಿದ್ಯಾಲಯ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿ ಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ.
ಬಾಲಕರ ತಂಡದಲ್ಲಿ  ಅಕ್ಷಯ್ ಬಿಲ್ಲವ, ಪ್ರಜ್ವಲ್ ಪೈ,ರಿತಿಕ್ ಆರ್ ಪೂಜಾರಿ, ಸನ್ಮಿತ್, ನಿಹಾಲ್ ಎಸ್ ಪೂಜಾರಿ,ಸಂಕೇತ್, ಕೀರ್ತನ್ ಡಿ ಪೂಜಾರಿ, ಪ್ರಥಮ್ ಯು ಮೇಸ್ತ, ರಜತ್, ಮತ್ತು ಆದಿತ್ಯ ಶೆಟ್ಟಿ  ಹಾಗೂ ಬಾಲಕಿಯರ ತಂಡದಲ್ಲಿ ಕ್ಷಮಾ ಆಚಾರ್ಯ, ಸನ್ನಿಧಿ ಕರ್ಣಿಕ್, ಸಹನಾ ಖಾರ್ವಿ, ಸುನಿಧಿ ಕರ್ಣಿಕ್,  ಖುಷಿ, ಶ್ರೇಷ್ಠ ಮೇಸ್ತ, ಮಾನ್ಯ ಖಾರ್ವಿ, ಶ್ರೀನಿಧಿ ವಿ ಖಾರ್ವಿ, ಸಾಪೇಕ್ಷಾ ಖಾರ್ವಿ ಮತ್ತು ಭೂಮಿಕಾ ಖಾರ್ವಿ ಪ್ರತಿನಿಧಿಸಿದ್ದರು. ಕ್ಷಮ ಆರ್ ಆಚಾರ್ಯ,  ಸುನಿಧಿ ಕರ್ಣಿಕ್, ಸಹನಾ ಖಾರ್ವಿ, ಅಕ್ಷಯ್ ಬಿಲ್ಲವ, ಪ್ರಜ್ವಲ್ ಪೈ ಮತ್ತು ರಿತಿಕ್ ಆರ್ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ ಮಾರ್ಗದರ್ಶನ ನೀಡಿದ್ದರು.
ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಬೋಧಕ ಮತ್ತು ಬೋಧಕೇತರ ವೃಂದ ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದೆ

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!