spot_img
Friday, April 3, 2026
spot_img

ಮಾಜಿ ಶಾಸಕ ಲಕ್ಷ್ಮೀನಾರಾಯಣ ನಿಧನಕ್ಕೆ ಶಾಸಕ ಗಂಟಿಹೊಳೆ ಸಂತಾಪ

ಬೈಂದೂರು: ಮಾಜಿ ಶಾಸಕರಾದ ಕೆ. ಲಕ್ಷ್ಮೀನಾರಾಯಣ  ಅವರ ನಿಧನಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಸಂತಾಪ ಸೂಚಿಸಿದ್ದಾರೆ.
ಪಕ್ಷ ಸಂಘಟನೆಯಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯಕರ್ತರನ್ನು ಸಂಘಟಿಸಿದ್ದ ಲಕ್ಷ್ಮೀನಾರಾಯಣರು ಅವರು ಶಾಸಕರಾಗಿದ್ದ ಅವಧಿಯಲ್ಲಿ ಅಭಿವೃದ್ಧಿಯ ಶಕೆಯನ್ನು ಆರಂಭಿಸಿದವರು. ನಾವೆಲ್ಲ ಸಣ್ಣವರಿದ್ದಾಗಲೇ ನಮ್ಮನ್ನು ಸದೃಢ ಕಾರ್ಯಕರ್ತರನ್ನಾಗಿ ಬೆಳೆಸಿದ ಅವರು, ಬೈಂದೂರನ್ನು ಬಹಳವಾಗಿ ಪ್ರೀತಿಸುತ್ತಾ ಕ್ಷೇತ್ರದ ಕಾರ್ಯಕರ್ತರ ಹಾಗೂ ಜನರ ಪ್ರೀತಿಗೆ ಪಾತ್ರರಾಗಿದ್ದವರು. ಜೀವನದುದ್ದಕ್ಕೂ ಭ್ರಷ್ಟಾಚಾರವನ್ನು ವಿರೋಧಿಸುತ್ತಲೇ ಬದುಕಿದ್ದ ಅವರು, ಅನಾರೋಗ್ಯದ ಸಂದರ್ಭದಲ್ಲಿಯೂ ಕ್ಷೇತ್ರದ ಜನರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದವರು. ಅವರ ನಿಧನ ಬೈಂದೂರು ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!