spot_img
Wednesday, April 1, 2026
spot_img

ಐಎಎಫ್ ಸೇರಿದ ಚೇತಕ್ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ಕೋಲಾರದಲ್ಲಿ ತುರ್ತು ಭೂಸ್ಪರ್ಶ !

ಜನಪ್ರತಿನಿಧಿ (ಕೋಲಾರ) : ಚೆನ್ನೈನ ತಂಬರಂ ವಾಯುನೆಲೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಿಂದ ತೆರಳುತ್ತಿದ್ದ ಭಾರತೀಯ ವಾಯುಪಡೆಗೆ (ಐಎಎಫ್) ಸೇರಿದ ಚೇತಕ್ ಹೆಲಿಕಾಪ್ಟರ್ ಸಣ್ಣ ತಾಂತ್ರಿಕ ದೋಷದಿಂದ ಕೋಲಾರ ತಾಲೂಕಿನ ದೊಡ್ಡೂರು ಕರಪನಹಳ್ಳಿ ಎಂಬಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ವಿಮಾನದಲ್ಲಿ ಮೂವರು ಪೈಲಟ್‌ಗಳಿದ್ದರು. ಡಿಕೆ ಹಳ್ಳಿಯಲ್ಲಿ ಹೆಲಿಕಾಪ್ಟರ್ ಬಂದಿಳಿದ ಬಗ್ಗೆ ತಮ್ಮ ಹೊಲದಲ್ಲಿದ್ದ ಕೆಲಸ ಮಾಡುತ್ತಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರ ತಂಡವು ಕೂಡಲೇ ಸ್ಥಳಕ್ಕೆ ಧಾವಿಸಿತು. ಹೆಲಿಕಾಪ್ಟರ್ ತಾಂತ್ರಿಕ ಸಮಸ್ಯೆಗಳಿಂದ ಕೂಡಿದ್ದರಿದ ಸಿಬ್ಬಂದಿ ತುರ್ತು ಭೂಸ್ಪರ್ಶ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಪ್ರತಿಕ್ರಿಯಿಸಿದ್ದು, ಹೆಲಿಕಾಪ್ಟರ್ ಸಹಿತ ವಿಮಾನದಲ್ಲಿದ್ದವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿರುವ ಐಎಎಫ್‌ನ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಪ್ರೋಟೋಕಾಲ್‌ಗೆ ಬದ್ಧವಾಗಿ, ಎಲ್ಲಾ ಮೂವರು ಪೈಲಟ್‌ಗಳಿಗೆ ಬಿಇಎಂಎಲ್ ಅತಿಥಿಗೃಹದಲ್ಲಿ ವಸತಿ ಕಲ್ಪಿಸಲಾಗಿದ್ದು, ಹೆಲಿಕಾಪ್ಟರ್ ಸುತ್ತಲೂ ಭದ್ರತಾ ಪರಿಧಿಯನ್ನು ಸ್ಥಾಪಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಶಾಂತರಾಜು ತಿಳಿಸಿದ್ದಾರೆ.

ಚೇತಕ್‌ನ ನಿರ್ವಹಣಾ ಕಾರ್ಯವನ್ನು ಕೈಗೊಳ್ಳಲು ತಂತ್ರಜ್ಞರ ತಂಡವು ಮತ್ತೊಂದು ಹೆಲಿಕಾಪ್ಟರ್‌ನಲ್ಲಿ ಸ್ಥಳಕ್ಕೆ ತಲುಪಿದೆ ಎಂದು ಅವರು ಹೇಳಿದರು. ಅವರ ನೆರವಿಗೆ ಘಟನಾ ಸ್ಥಳದಲ್ಲಿ ಬೆಳಕಿನ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಇದೇ ವೇಳೆ ಮತ್ತೊಂದು ತಂಡ ರಸ್ತೆ ಮಾರ್ಗವಾಗಿ ಸ್ಥಳಕ್ಕೆ ತಲುಪುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!