spot_img
Monday, June 23, 2025
spot_img

ವಿಧಾನ ಪರಿಷತ್ತಿನ ಉಪಚುನಾವಣೆ : ಕಿಶೋರ್‌ ಕುಮಾರ್‌ ಬೊಟ್ಯಾಡಿ ಬಿಜೆಪಿ ಅಭ್ಯರ್ಥಿ !

ಜನಪ್ರತಿನಿಧಿ (ದಕ್ಷಿಣ ಕನ್ನಡ) : ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ಕಾರಣದಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷ ಇಂದು (ಮಂಗಳವಾರ) ತನ್ನ ಅಭ್ಯರ್ಥಿಯ ಹೆಸರನ್ನು ಘೋಷಿಸಿದೆ.

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್‌ ಕುಮಾರ್‌ ಬೊಟ್ಯಾಡಿ ಅವರನ್ನು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಣೆ ಮಾಡಿದೆ.

ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ದಕ್ಷಿಣ ಕನ್ನಡ ಬಿಜೆಪಿಯ ಸತೀಶ್‌ ಕುಂಪಲ ಸೇರಿ ಹಲವರು ಈ ಅಭ್ಯರ್ಥಿತನಕ್ಕಾಗಿ ಕಣ್ಣಿಟ್ಟಿದ್ದರು. ನಳೀನ್‌ ಕುಮಾರ್‌ ಕಟೀಲ್‌ ಹಾಗೂ ಪ್ರಮೋದ್‌ ಮಧ್ವರಾಜ್‌ ಅವರನ್ನು ಮತ್ತೆ ಬಿಜೆಪಿ ಹೈಕಮಾಂಡ್‌ ಕಡೆಗಣಿಸಿದಂತಿದೆ.

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!