Friday, October 18, 2024

ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ಆನೆ ಸಂರಕ್ಷಣೆ, ಆರೈಕೆ ಮತ್ತು ಪುನರ್ವಸತಿ ಶಿಬಿರ : ಈಶ್ವರ ಖಂಡ್ರೆ

ಜನಪ್ರತಿನಿಧಿ (ಬೆಂಗಳೂರು) : ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ನಿಯಂತ್ರಿಸಲು ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ರಾಜ್ಯದ ಮತ್ತೊಂದು ಆನೆ ಸಂರಕ್ಷಣೆ, ಆರೈಕೆ ಮತ್ತು ಪುನರ್ವಸತಿ ಶಿಬಿರ ಆರಂಭಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಆನೆಗಳ ಹಾವಳಿ ನಿಯಂತ್ರಣಕ್ಕೆ ಕಾಡಿನ ಅಂಚಿನಲ್ಲಿ 700 ರಿಂದ 800 ಕಿ.ಮೀ. ರೈಲು ಕಂಬಿ ಬ್ಯಾರಿಕೇಡ್‌ ನಿರ್ಮಿಸಬೇಕೆಂಬ ಬೇಡಿಕೆ ಇದೆ. ಈವರೆಗೆ 300 ಕಿ.ಮೀ. ಬ್ಯಾರಿಕೇಡ್‌ ನಿರ್ಮಿಸಲಾಗಿದೆ. ಈ ಬಾರಿ 110 ಕಿ.ಮೀ. ಬ್ಯಾರಿಕೇಡ್‌ ನಿರ್ಮಾಣಕ್ಕೆ ಚಾಲನೆ ನೀಡಿದ್ದೇವೆ. ಬರುವ ಎರಡು ವರ್ಷದಲ್ಲಿ ಇನ್ನೂ 200 ರಿಂದ 300 ಕಿ.ಮೀ. ಬ್ಯಾರಿಕೇಡ್‌ ನಿರ್ಮಿಸಲಾಗುವುದು ಎಂದು ಖಂಡ್ರೆ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!