Tuesday, October 22, 2024

ಸ್ಥಳೀಯಾಡಳಿತದ ಮೂರು ಸ್ತರಗಳ ಅನುಭವಿ ರಾಜು ಪೂಜಾರಿ ಅವರನ್ನು ಗೆಲ್ಲಿಸಿ-ಮಂಜುನಾಥ ಭಂಡಾರಿ

ಕುಂದಾಪುರ: ಸ್ಥಳೀಯಾಡಳಿತಕ್ಕೆ ಶಕ್ತಿ ನೀಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮತ್ತು ಸ್ಥಳೀಯಾಡಳಿತದ ಮೂರು ಸ್ತರಗಳಲ್ಲಿ ಕೆಲಸ ಮಾಡಿ ಅಪಾರ ಅನುಭವ ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿಯವರನ್ನು ಗೆಲ್ಲಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ ನೀಡಿದರು.

ತೆಕ್ಕಟ್ಟೆ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಸಭೆಯ ಅಧ್ಯಕ್ಷತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ವಹಿಸಿದ್ದರು.

ಸಭೆಯಲ್ಲಿ ಮಾಜಿ ಸಚಿವರಾದ ಕೆ. ಜಯಪ್ರಕಾಶ ಹೆಗ್ಡೆ, ವಿನಯ ಕುಮಾರ ಸೊರಕೆ, ಅಭ್ಯರ್ಥಿ ರಾಜು ಪೂಜಾರಿ, ಕೆಪಿಸಿಸಿ ಉಸ್ತುವಾರಿ ಮಿಥುನ್ ರೈ, ಎಂ . ಎಸ್. ಮಹಮದ್, ಕಿಶನ್ ಹೆಗ್ಡೆ ಎಂ. ದಿನೇಶ್ ಹೆಗ್ಡೆ, ಮಲ್ಯಾಡಿ ಶಿವರಾಮ ಶೆಟ್ಟಿ, ಬಿ ಹಿರಿಯಣ್ಣ, ದೇವಾನಂದ ಶೆಟ್ಟಿ, ಪ್ರಸನ್ನ ಶೆಟ್ಟಿ ಕೆರಾಡಿ, ವಿಕಾಸ ಹೆಗ್ಡೆ, ರೇಖಾ ಪೂಜಾರಿ, ದೇವಕಿ ಸಣ್ಣಯ್ಯ, ಕೃಷ್ಣದೇವ ಕಾರಂತ, ರಮಾನಂದ ಶೆಟ್ಟಿ, ಅಶೋಕ ಪೂಜಾರಿ ಬೀಜಾಡಿ, ರೋಶನ್ ಶೆಟ್ಟಿ ಇನ್ನಿತರು ಉಪಸ್ಥಿತರಿದ್ದರು.

ಬ್ಲಾಕ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಸ್ವಾಗತಿಸಿ, ಶಂಕರ್ ಕುಂದರ್ ವಂದಿಸಿ, ಬ್ಲಾಕ್ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!