spot_img
Friday, April 3, 2026
spot_img

ಮುಂಬೈ ಬೆಂಗಳೂರು ವಿಮಾನ ಸೇರಿ ಹಲವು ವಿಮಾನಗಳಿಗೆ ಬಾಂಬ್‌ ಬೆದರಿಕೆ !

ಜನಪ್ರತಿನಿಧಿ (ನವ ದೆಹಲಿ) : ಮುಂಬೈಯಿಂದ ಬೆಂಗಳೂರಿಗೆ ತೆರಳಬೇಕಿದ್ದ ವಿಮಾನವನ್ನು ಒಳಗೊಂಡು ಇಂಡಿಗೋ, ವಿಸ್ತಾರ ಏರ್​ಲೈನ್ಸ್​​, ಏರ್​ ಇಂಡಿಯಾದ ಸುಮಾರು 30ಕ್ಕೂ ಹೆಚ್ಚು ವಿಮಾನಗಳಿಗೆ ಮತ್ತೆ ಬಾಂಬ್ ಬೆದರಿಕೆ ಸಂದೇಶ ಬಂದಿವೆ ಎಂದು ಮಾಹಿತಿ ಲಭ್ಯವಾಗಿದೆ.

10 ಇಂಡಿಗೋ, 10 ವಿಸ್ತಾರ ವಿಮಾನಗಳಿಗೆ ಬೆದರಿಕೆ ಸಂದೇಶ ಬಂದಿವೆ ಎಂದು ವಿಮಾನಯಾನ ಸಂಸ್ಥೆಗಳು ಮಾಹಿತಿ ನೀಡಿವೆ.

ಅಕ್ಟೋಬರ್ 21 ರಂದು ಕೆಲವು ವಿಸ್ತಾರಾ ವಿಮಾನಗಳಿಗೆ ಸಾಮಾಜಿಕ ಮಾಧ್ಯಮದಲ್ಲಿ ಭದ್ರತಾ ಬೆದರಿಕೆ ಸಂದೇಶಗಳು ಬಂದಿವೆ. ನಾವು ತಕ್ಷಣ ಸಂಬಂಧಿತ ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ನೀಡಿದ್ದೇವೆ ಮತ್ತು ಅವರು ಎಲ್ಲಾ ಸುರಕ್ಷತಾ ಕಾರ್ಯವಿಧಾನಗಳನ್ನು ಅನುಸರಿಸಿದ್ದಾರೆ. ನಮ್ಮ ಗ್ರಾಹಕರು, ಸಿಬ್ಬಂದಿ ಮತ್ತು ವಿಮಾನಗಳ ಸುರಕ್ಷತೆ ನಮಗೆ ಅತ್ಯಂತ ಮಹತ್ವದ್ದಾಗಿದೆ ಎಂದು ವಿಸ್ತಾರ ಏರ್​ಲೈನ್ಸ್ ಪ್ರಕಟಣೆ ತಿಳಿಸಿದೆ.

ಬಾಂಬ್ ಬೆದರಿಕೆ :
6E-63 ದೆಹಲಿ – ಜೆಡ್ಡಾ, 6E-12 ಇಸ್ತಾಂಬುಲ್ – ದೆಹಲಿ, 6E-83 ದೆಹಲಿ – ದಮ್ಮಾಮ್, 6E-65 ಕೋಜಿಕೋಡ್ – ಜೆಡ್ಡಾ, 6E-67 ಹೈದರಾಬಾದ್ – ಜೆಡ್ಡಾ, 6E-77 ಬೆಂಗಳೂರು – ಜೆಡ್ಡಾ, 6E-18 ಇಸ್ತಾಂಬುಲ್ – ಮುಂಬೈ, 6E-164 ಮಂಗಳೂರು – ಮುಂಬೈ, 6E-118 ಲಕ್ನೋ ಅಹಮದಾಬಾದ್ ಸೇರಿದಂತೆ ಸುಮಾರು 30 ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ.

ಮತ್ತೊಂದೆಡೆ, ಸೋಮವಾರ ಕಾರ್ಯನಿರ್ವಹಿಸುತ್ತಿದ್ದ ಏರ್ ಇಂಡಿಯಾದ ಕೆಲವು ವಿಮಾನಗಳಿಗೆ ಬೆದರಿಕೆಗಳು ಬಂದಿವೆ ಎಂದು ಏರ್ ಇಂಡಿಯಾ ವಕ್ತಾರರು ಖಚಿತಪಡಿಸಿದ್ದಾರೆ.

ಪ್ರೋಟೋಕಾಲ್ ಪ್ರಕಾರ, ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಅಧಿಕಾರಿಗಳು ಮತ್ತು ಭದ್ರತಾ ಏಜೆನ್ಸಿಗಳ ಮಾರ್ಗದರ್ಶನದಂತೆ ಎಲ್ಲಾ ಸುರಕ್ಷತಾ ಕಾರ್ಯವಿಧಾನಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ.

ಹೆಚ್ಚಿದ ಬಾಂಬ್ ದಾಳಿ ಬೆದರಿಕೆ
ದೇಶದ ವಿಮಾನಯಾನ ಸಂಸ್ಥೆಗಳಿಗೆ ಕಳೆದ ಕೆಲವು ದಿನಗಳಲ್ಲಿ ಬಾಂಬ್ ದಾಳಿ ಬೆದರಿಕೆ ಸಂದೇಶಗಳು ಬರುವುದು ಹೆಚ್ಚಾಗತೊಡಗಿದೆ. ಕಳೆದ ಒಂದು ವಾರದಲ್ಲಿ 120 ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ.

ಇದು ಹುಸಿ ಬಾಂಬ್ ಬೆದರಿಕೆಗಳಾಗಿದ್ದರೂ, ನಾವು ಇಂಥ ವಿಚಾರಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ನಾಗರಿಕ ವಿಮಾನಯಾನ ಸಚಿವ ಕೆ ರಾಮಮೋಹನ್ ನಾಯ್ಡು ಹೇಳಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!