spot_img
Monday, June 23, 2025
spot_img

ವಿಧಾನ ಪರಿಷತ್‌ ಉಪಚುನಾವಣೆ : ನಿರೀಕ್ಷೆಯಂತೆ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿಗೆ ಸುಲಭ ಜಯ

ಜನಪ್ರತಿನಿಧಿ(ಮಂಗಳೂರು) : ಕೋಟ ಶ್ರೀನಿವಾಸ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಸ್ಥಾನಕ್ಕೆ ನಡೆದ ವಿಧಾನ ಪರಿಷತ್‌ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು(ಗುರುವಾರ) ನಡೆದಿದ್ದು, ನಿರೀಕ್ಷೆಯಂತೆ ಬಿಜೆಪಿಯ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ, ಸಮೀಪದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ ಅವರೆದುರಿಗೆ ಜಯ ಸಾಧಿಸಿದ್ದಾರೆ.

ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು, ಇಂದು (ಅ.24) ಚುನಾವಣಾ ಫಲಿತಾಂಶ ಹೊರಬಿದ್ದಿದೆ.

ಒಟ್ಟು 5907ಮತಗಳಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಅವರು 3655 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ, ಕಾಂಗ್ರೆಸ್ ನ ರಾಜು ಪೂಜಾರಿ 1958 ಮತಗಳನ್ನು ಗಳಿಸಿದರೆ, ಎಸ್ ಡಿಪಿಐ ಅಭ್ಯರ್ಥಿ 195, ದಿನಕರ್ ಉಲ್ಲಾಳ್ 9 ಮತಗಳನ್ನು ಪಡೆದಿದ್ದಾರೆ. ಇನ್ನು, 90 ಮತಗಳು ಅಮಾನ್ಯಗೊಂಡಿವೆ ಎಂದು ತಿಳಿದು ಬಂದಿದೆ.

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!