spot_img
Thursday, April 2, 2026
spot_img

ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರ : ಯಕ್ಷ ಸಪ್ತಾಹಕ್ಕೆ ಚಾಲನೆ

ಸಾಸ್ತಾನ: ಯಕ್ಷಗಾನ ಕಲಿಕೆಗೆ ಗುರುತ್ವ ಅತೀ ಮುಖ್ಯ. ಇಂತಹ ಗುರುತ್ವವನ್ನು ಯಕ್ಷಗಾನ ಕಲಾಕೇಂದ್ರಗಳು ನೀಡುತ್ತದೆ. ಹಾಗೂ ಹಂಗಾರಕಟ್ಟೆ ಕಲಾಕೇಂದ್ರವು ಶ್ರೇಷ್ಠ ಯಕ್ಷಗುರುಕುಲ ಎನ್ನುವುದಕ್ಕೆ ಇಲ್ಲಿಂದ ತಯಾರಾದ ನೂರಾರು ಯಶಸ್ವೀ ಶಿಷ್ಯ ವೃಂದವೇ ಸಾಕ್ಷಿ ಎಂದು ಎಡನೀರು ಮಠದ  ಸಚ್ಚೀದಾನಂದ ಭಾರತೀ ಶ್ರೀಪಾದರು ತಿಳಿಸಿದರು.

ಅವರು ಅಕ್ಟೋಬರ್ 21 ರಂದು ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದ ಆಶ್ರಯದಲ್ಲಿ, ಗುಂಡ್ಮಿಯ ಸದಾನಂದ ರಂಗ ಮಂಟಪದಲ್ಲಿ ಜರುಗಿದ ಯಕ್ಷಗಾನ ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದರು. ಯಕ್ಷಗಾನ ಕಲೆಗೆ ತನ್ನದೆ ಆದ ವಿಶಿಷ್ಟ ಕಲಾಚೌಕಟ್ಟು ಇದೆ. ಕಲಾವಿದರು ಈ ಚೌಕಟ್ಟನ್ನು ಮೀರಬಾರದು. ಅದೇ ರೀತಿ ಪ್ರೇಕ್ಷಕರು ಸಹ್ಯವಾದವನ್ನು ಮಾತ್ರ ಸ್ವೀಕರಿಸಬೇಕು ಎಂದರು.

ಬಸ್ರೂರು ಮಹಾಲಿಂಗೇಶ್ವರ ದೇಗುಲದ ಆಡಳಿತ ಮೊಕ್ತೆಸರ ಬಿ.ಅಪ್ಪಣ್ಣ ಹೆಗ್ಡೆ ಮಾತನಾಡಿ, ಯಕ್ಷಗಾನ ಕ್ಷೇತ್ರಕ್ಕೆ ಹಂಗಾರಕಟ್ಟೆ ಕಲಾಕೇಂದ್ರದ ಕೊಡುಗೆ ಅತ್ಯಂತ ದೊಡ್ಡದು. ಸಂಸ್ಥೆಯ ಉಳಿವಿಗೆ ಎಲ್ಲರೂ ಸಹಕರಿಸಬೇಕು ಎಂದರು. ಕಲಾಕೇಂದ್ರದ ಅಧ್ಯಕ್ಷ ಆನಂದ್.ಸಿ.ಕುಂದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಲಿಗ್ರಾಮ ಗುರುನರಸಿಂಹ ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಡಾ|ಕೆ.ಎಸ್.ಕಾರಂತ , ಆನೆಗುಡ್ಡೆ ದೇಗುಲದ ಆಡಳಿತ ಮೊಕ್ತಸರ ಶ್ರೀ ರಮಣ ಉಪಾಧ್ಯ, ಸಾಲಿಗ್ರಾಮ ದೇಗುಲದ ಮಾಜಿ ಅಧ್ಯಕ್ಷ ಡಾ.ಎ.ಪಿ.ಐತಾಳ ಇದ್ದರು. ಕಲಾಕೇಂದ್ರದ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ್ ಸ್ವಾಗತಿಸಿ ಕ.ಸಾ.ಪ ಬ್ರಹ್ಮಾವರ ತಾಲೂಕು ಅಧ್ಯಕ್ಷ ರಾಮಚಂದ್ರ ಐತಾಳ್ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!