spot_img
Sunday, February 15, 2026
spot_img

ಕರ್ನಾಟಕ ವಿಧಾನಸಭೆ ಸಚಿವಾಲಯಗಳ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : ಸಂಪೂರ್ಣ ಮಾಹಿತಿ ಇಲ್ಲಿದೆ.

ಜನಪ್ರತಿನಿಧಿ (ಮಾಹಿತಿ) : ಕರ್ನಾಟಕ ವಿಧಾನಸಭೆ ಸಚಿವಾಲಯ ವಿವಿಧ 37 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳುವ ಉದ್ದೇಶದಿಂದ ಅಧಿಸೂಚನೆ ಹೊರಡಿಸಿದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಆಸಕ್ತರು ಸದರಿ ವಿಧಾನಸಭೆ ಸಚಿವಾಲಯದ ವಿವಿಧ ಹುದ್ದೆಗಳಿಗೆ ನವೆಂಬರ್ 25 ರೊಳಗೆ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ ಹೆಸರು ಮತ್ತು ವೇತನ ಶ್ರೇಣಿ
ಕನ್ನಡ ವರದಿಗಾರರು -Rs.61,300 – 1,12,900.
ಆಂಗ್ಲ ವರದಿಗಾರರು -Rs.61,300 – 1,12,900.
ಕಂಪ್ಯೂಟರ್ ಆಪರೇಟರ್ ‌ – Rs.49,050- 92,500.
ದಲಾಯತ್     -Rs.27,00-46,675.
ಸ್ವೀಪರ್          -Rs.27,00-46,675.
ಜೂನಿಯರ್ ಪ್ರೋಗ್ರಾಮರ್   -Rs.69,250 – 1,34,200.
ಕಿರಿಯ ಸಹಾಯಕರು -Rs.34,100- 67,600.
ಕಿರಿಯ ಗ್ರಂಥಾಲಯ ಸಹಾಯಕರು  -Rs.34,100- 67,600.
ಮಸಾಜರ್ -Rs.29,600- 52,800.
ಬಡಗಿ  – Rs.29,600- 52,800.

ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಕುರಿತ ಪ್ರಮುಖ ಸೂಚನೆಗಳು ಈ ಕೆಳಗಿನಂತಿವೆ :
ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆ-1 ರ ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು, ವಿಧಾನ ಸಭೆ ಸಚಿವಾಲಯಕ್ಕೆ ನಿಗದಿಪಡಿಸಿದ ಕೊನೆ ದಿನಾಂಕದೊಳಗೆ ಸಲ್ಲಿಸಬೇಕು.

ಸರ್ಕಾರಿ ಇಲಾಖೆಯಲ್ಲಿ ಈಗಾಗಲೇ ಸೇವೆಯಲ್ಲಿರುವವರು, ಈ ಹುದ್ದೆಗೆ ಅರ್ಜಿ ಹಾಕಲು ಬಯಸಿದ್ದಲ್ಲಿ, ಅಭ್ಯರ್ಥಿಗಳು ಅರ್ಜಿಗಳನ್ನು ತಮ್ಮ ನೇಮಕಾತಿ ಪ್ರಾಧಿಕಾರದ ಮೂಲಕ ಅನುಬಂಧ-ಡಿ ಪ್ರಮಾಣಪತ್ರದೊಂದಿಗೆ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

  • ಮೀಸಲಾತಿ ಕೋರುವ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.
  • ಹುಟ್ಟಿದ ದಿನಾಂಕದ ಪ್ರಮಾಣಪತ್ರ ಲಗತ್ತಿಸುವುದು.
  • ಹುದ್ದೆಗಳಿಗೆ ನಿಗದಿತ ವಿದ್ಯಾರ್ಹತೆ ಪ್ರಮಾಣಪತ್ರಗಳನ್ನು ಲಗತ್ತಿಸುವುದು.
  • ಆರು ತಿಂಗಳ ಒಳಗಿನ ನಡತ ಪ್ರಮಾಣ ಪತ್ರ / ಶಾಲಾ ನಡವಳಿಕೆ ಪ್ರಮಾಣಪತ್ರ ಸಲ್ಲಿಸುವುದು.

ಕರ್ನಾಟಕ ವಿಧಾನಸಭೆ ಸಚಿವಾಲಯದ ನೇಮಕಾತಿ ಮತ್ತು ಸೇವಾ ಷರತ್ತುಗಳು, ನಿಯಮಾವಳಿಗಳು, 2003ರ ರೀತ್ಯಾ ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಕಾರ್ಯ ವಿಧಾನವನ್ನು ನಿಗದಿಪಡಿಸುವ ಅಧಿಕಾರ ಮಾನ್ಯ ಸಭಾಧ್ಯಕ್ಷರವರಿಗೆ ಇರುಲಿದೆ ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ಆಯ್ಕೆಯಾಗಲಿರುವ ಅಭ್ಯರ್ಥಿಯ ನೇಮಕಾತಿ ಕುರಿತು ಸಂಬಂಧಪಟ್ಟ ಪೊಲೀಸ್‌ ಠಾಣೆಯಲ್ಲಿ ಯಾವುದಾದರೂ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆಯೇ ಎಂಬ ಬಗ್ಗೆ ಪೊಲೀಸ್ ಪರಿಶೀಲನೆ, ದೃಢೀಕರಣ ಪತ್ರ ಹಾಗೂ ಜಾತಿ ಪ್ರಮಾಣಪತ್ರದ ಸಿಂಧುತ್ವ, ಕಲ್ಯಾಣ ಕರ್ನಾಟಕ ಪ್ರದೇಶದ ಪ್ರಮಾಣ ಪತ್ರದ ಸಿಂಧುತ್ವ ಮತ್ತು ವಿದ್ಯಾರ್ಹತೆಗೆ ಸಂಬಂಧಿಸಿದ ಅಂಕಪಟ್ಟಿಗಳ ನೈಜತೆಗೆ ಒಳಪಟ್ಟಿರುತ್ತದೆ.

ಅರ್ಜಿ ಪ್ರಕ್ರಿಯೆಗೆ ಸಂಬಂಧಿತ ಕೆಲವು ಸೂಚನೆಗಳು :

  • ಅರ್ಜಿಗಳ ಮೇಲೆ ಹುದ್ದೆಯ ಹೆಸರನ್ನು ಹಾಗೂ ಅರ್ಜಿದಾರರ ಹೆಸರು, ತಂದೆಯ ಹೆಸರು ಮತ್ತು ಸರಿಯಾದ ಅಂಚೆ ವಿಳಾಸವನ್ನು, e-Mail ಮತ್ತು ಮೊಬೈಲ್ ಸಂಖ್ಯೆಯನ್ನು ದಪ್ಪ ಅಕ್ಷರಗಳಲ್ಲಿ ನಮೂದಿಸತಕ್ಕದ್ದು.
  • ಅಭ್ಯರ್ಥಿಗಳು ಅರ್ಜಿಯ ಮೇಲೆ ಅಧಿಸೂಚನೆ ರೀತ್ಯಾ ಯಾವ ಮೀಸಲಾತಿಯಡಿ ಅರ್ಜಿ ಸಲ್ಲಿಸಲಾಗುತ್ತಿದೆಯೋ ಆ ಮೀಸಲಾತಿ ವರ್ಗೀಕರಣವನ್ನು ಸ್ಪಷ್ಟವಾಗಿ ಮತ್ತು ದಪ್ಪ ಅಕ್ಷರಗಳಲ್ಲಿ ನಮೂದಿಸತಕ್ಕದ್ದು.
  • ಅರ್ಜಿಯನ್ನು ಸಲ್ಲಿಸಲು ನೀಡಿರುವ ಕಾಲಾವಧಿಯು ಸರ್ಕಾರಿ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳು ಸೇರಿದಂತೆ ಎಲ್ಲಾ ಅಭ್ಯರ್ಥಿಗಳಿಗೂ ಅನ್ವಯವಾಗುವುದು.
  • ಅಗತ್ಯ ಪ್ರಮಾಣಪತ್ರಗಳನ್ನು ಲಗತ್ತಿಸದೆ ಇರುವ, ಲೋಪದಿಂದ ಕೂಡಿರುವ ಅರ್ಜಿಗಳನ್ನು, ಅಪೂರ್ಣ ಅರ್ಜಿಗಳನ್ನು ಹಾಗೂ ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
  • ಅಭ್ಯರ್ಥಿಗಳು ಮೂಲ ಪ್ರಮಾಣಪತ್ರಗಳನ್ನು ಲಗತ್ತಿಸಬಾರದು.

ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ ನಂತರ ಆ ಸಂಬಂಧ ಯಾವುದೇ ಪತ್ರ ವ್ಯವಹಾರಕ್ಕೆ ಅವಕಾಶವಿರುವುದಿಲ್ಲ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!