spot_img
Friday, May 23, 2025
spot_img

ವಕ್ಫ್‌ ಆಸ್ತಿ ವಿವಾದ | ರೈತರಿಗೆ ಸಮಸ್ಯೆ ಆಗಬಾರದು, ನಮ್ಮ ನಿಲುವಿನಲ್ಲಿ ಯಾವ ಬದಲಾವಣೆ ಇಲ್ಲ : ಸಿಎಂ ಸ್ಪಷ್ಟನೆ

ಜನಪ್ರತಿನಿಧಿ (ಬೆಂಗಳೂರು) : ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ವಿಜಯಪುರ, ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಧ್ಯಮ ವರದಿಗಾರರಿಗೆ ಸ್ಪಂದಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್, ವಕ್ಫ್ ಸಚಿವರಾದ ಜಮೀರ್ ಅಹ್ಮದ್ ಅವರು ನಿನ್ನೆ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಿದ್ದಲ್ಲದೇ, ರೈತರಿಗೆ ಸಮಸ್ಯೆ ಆಗಬಾರದು ಎಂಬ ನಮ್ಮ ನಿಲುವಿನಲ್ಲಿ ಯಾವ ಬದಲಾವಣೆ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!