spot_img
Thursday, April 2, 2026
spot_img

ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ವಿಧಿವಶ

ಜನಪ್ರತಿನಿಧಿ (ಉಡುಪಿ) : ರಾಷ್ಟ್ರಪ್ರಶಸ್ತಿ ಪುರಸ್ಕೃತ, ಹಿರಿಯಡಕದ ಕುದಿ ಗ್ರಾಮದ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ಅವರು  ಅಲ್ಪಕಾಲದ ಅಸೌಖ್ಯದಿಂದ ಇಂದು(ಸೋಮವಾರ, ನ.11) ವಿಧಿವಶರಾಗಿದ್ದಾರೆ.

1980ರಿಂದ ತನ್ನ ಊರಿನ ಪ್ರೌಢಶಾಲೆಯಲ್ಲಿ ಸ್ಥಾಪಕ ಮುಖ್ಯ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿ ಮೂರು ದಶಕಗಳ ಕಾಲ ಸಲ್ಲಿಸಿದ್ದಾರೆ.

ಕುದಿ ವಸಂತ ಶೆಟ್ಟಿಯವರು ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಸ್ಥಾಪಕ ಕಾರ್ಯದರ್ಶಿಯಾಗಿ 4 ವರ್ಷ, ಅಧ್ಯಕ್ಷರಾಗಿ 5 ವರ್ಷ ಸೇವೆ ಸಲ್ಲಿಸಿದ್ದಾರೆ. ಉತ್ತಮ ವಾಗ್ಮಿ, ಸಂಪನ್ಮೂಲ ವ್ಯಕ್ತಿಯೂ ಆಗಿದ್ದ ಅವರು ಊರಿನ ದೇವಸ್ಥಾನ, ದೈವಸ್ಥಾನಗಳ ಸಮಿತಿಯಲ್ಲಿ ಸೇವೆ ಮಾಡಿದವರು.

ಮೃತರು ಪತ್ನಿ ಇಬ್ಬರು ಪುತ್ರಿಯರು, ಸಹೋದರ ಸಹೋದರಿಯರನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!