spot_img
Wednesday, April 1, 2026
spot_img

ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ಸುಣ್ಣಾರಿ: ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

ಕುಂದಾಪುರ: ಸರಕಾರದಿಂದ ಎಲ್ಲಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಮಾಡಲು ಸಾಧ್ಯವಾಗುದಿಲ್ಲ. ಸ್ಥಳೀಯರು ಮತ್ತು ದಾನಿಗಳು ಕೈಜೋಡಿಸಿದರೆ ಕಾರ್ಯಕ್ರಮಗಳು ಅರ್ಥಪೂರ್ಣವಾಗಿ ಮುಡಿ ಬರುತ್ತದೆ. ವಿದ್ಯಾರ್ಥಿಗಳು ಪಾಠದ ಜೊತೆಗೆ ಪಾಠೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು. ಪೋಷಕರು ಪ್ರೋತ್ಸಾಹ ನೀಡಿದರೆ ಮಕ್ಕಳಲ್ಲಿ ಪ್ರತಿಭಟ ಅರಳಲು ಸಾಧ್ಯವಿದೆ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಹೈಸ್ಕೂಲು ಸುಣ್ಣಾರಿ ಕುಂದಾಪುರ ಇವರ ಸಹಯೋಗದೊಂದಿಗೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಹೈಸ್ಕೂಲಿನ ವಠಾರದಲ್ಲಿ ಶುಕ್ರವಾರ ಜರಗಿದ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿ ೨೦೨೪-೨೫ ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾರ ಶಿಕ್ಷಣ ಇಲಾಖೆಯಿಂದ ಶೈಕ್ಷಣಿಕ ಬೆಳವಣಿಗೆ ಜೊತೆಗೆ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಪಾಠೇತರ ಚಟುವಟಿಕೆಗಳನ್ನು ಮಾಡುತ್ತಿದ್ದು, ಇದರಲ್ಲಿ ಮಕ್ಕಳು ಸಕ್ರೀಯವಾಗಿ ಭಾಗವಹಿಸಬೇಕಿದೆ. ಇಂತಹ ಕಾರ್ಯಕ್ರಮಗಳಿಗೆ ಸರಕಾರ ನೀಡುವ ಅನುದಾನ ಸರ್ಟಿಫಿಕೇಟ್ ನೀಡಲು ಸಾಕಾಗುದಿಲ್ಲ. ಆದರೆ ಸ್ಥಳೀಯರ ಮತ್ತು ದಾನಿಗಳ ಸಹಕಾರದಿಂದ ಇಂತಹ ಕಾರ್ಯಕ್ರಮಗಳು ಅರ್ಥಪೂರ್ಣವಾಗಿ ನಡೆಯುತ್ತಿರುವುದು ಶ್ಲಾಘನೀಯ ಎಂದರು.

ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲಾ ನಿರ್ದೇಶಕ ಗಣಪತಿ ಕೆ., ದಾನಿ ದಿನೇಶ ಹೆಗ್ಡೆ ಮೊಳಹಳ್ಳಿ, ಹೊಂಬಾಡಿ-ಮಂಡಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಶೆಟ್ಟಿ, ಉಪಾಧ್ಯಕ್ಷ ಅರುಣ್ ಕುಮಾರ್ ಹೆಗ್ಡೆ ಶುಭಾಂಶನೆಗೈದರು. ಇದೇ ಸಂದರ್ಭ ಕರಾಟೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕಾಲೇಜಿನ ವಿದ್ಯಾರ್ಥಿನಿ ನವಮಿ ಎಸ್. ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಲೆಯ ಸಂಚಾಲಕ ಮಹೇಶ ಹೆಗ್ಡೆ, ಕಾಲೇಜಿನ ಪ್ರಾಂಶುಪಾಲ ನಾಗರಾಜ ಶೆಟ್ಟಿ, ಕಾರ್ಯಕ್ರಮದ ಜಿಲ್ಲಾ ನೋಡೆಲ್ ಅಧಿಕಾರಿ ಜ್ಯೋತಿ, ಕ್ಷೇತ್ರ ಸಮನ್ವಯಾಧಿಕಾರಿ ಅಶೋಕ ನಾಯ್ಕ್, ದೈಹಿಕ ಶಿಕ್ಷಣ ಪರಿವೀಕ್ಷಕ ಸತ್ಯನಾರಾಯಣ, ವಿವಿಧ ಶಿಕ್ಷಕರ ಸಂಘಟನೆಗಳ ಅಧ್ಯಕ್ಷರಾದ ಗಣೇಶ ಕುಮಾರ್ ಶೆಟ್ಟಿ, ಉದಯ ಕುಮಾರ್ ಶೆಟ್ಟಿ, ಪ್ರದೀಪ ಕುಮಾರ್ ಶೆಟ್ಟಿ, ಶಿವರಾಮ್, ಬಾಲಕೃಷ್ಣ ಶೆಟ್ಟಿ, ಪ್ರದೀಪ ಭಂಡಾರಿ, ಕಿಶನ್‌ರಾಜ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಎಸ್. ಶೆಟ್ಟಿ ಸ್ವಾಗತಿಸಿದರು. ಕಾರ್ಯಕ್ರಮದ ನೋಡೆಲ್ ಅಧಿಕಾರಿ ಶೇಖರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ಅಭಿನಂದನ ಭಟ್ ಕಾರ್ಯಕ್ರಮ ನಿರ್ವಹಿಸಿದರು. ಹೈಸ್ಕೂಲಿನ ಮುಖ್ಯೋಪಾಧ್ಯಾಯಿನಿ ಸರೋಜಿನಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!