spot_img
Wednesday, April 1, 2026
spot_img

ಸಂವಿಧಾನದ ಆಶಯಗಳು ನಮ್ಮ ರಾಜಕೀಯದ ಮತ್ತು ಸರ್ಕಾರದ ಸಿದ್ಧಾಂತವೂ ಹೌದು : ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ನಮ್ಮ ರಾಜಕೀಯದ ಮತ್ತು ಸರ್ಕಾರದ ಸಿದ್ಧಾಂತವೂ ಹೌದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಂವಿಧಾನದ ಮೂಲ ಆಶಯಗಳೊಂದಿಗೆ ಸಾಗುತ್ತಿರುವ ನಮ್ಮ ಸರ್ಕಾರ ಎದುರಾಗುವ ಎಲ್ಲ ಪ್ರತಿರೋಧಗಳನ್ನು ಬಾಬಾಸಾಹೇಬ್ ಅಂಬೇಡ್ಕರರು ನಮ್ಮ ಕೈಯಲ್ಲಿಟ್ಟು ಹೋಗಿರುವ ಸಂವಿಧಾನದ ಅಸ್ತ್ರದ ಮೂಲಕವೇ ಎದುರಿಸಿ ಮುನ್ನಡೆಯಲಿದೆ ಎಂದವರು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ದೇಶದ ಸರ್ವೋಚ್ಚ ನ್ಯಾಯಾಲಯ ಸಂವಿಧಾನದ ಪ್ರಸ್ತಾವಣೆಯಲ್ಲಿರುವ ಸಮಾಜವಾದಿ ಮತ್ತು ಜಾತ್ಯತೀತ ಆಶಯಗಳನ್ನು ಎತ್ತಿಹಿಡಿಯುತ್ತಿರುವುದು ಅತೀವ ಸಂತೋಷ ಮತ್ತು ಭವಿಷ್ಯದಲ್ಲಿ ಭರವಸೆಯನ್ನು ಮೂಡಿಸಿದೆ. ಭಾರತೀಯ ಸಂವಿಧಾನವು ಅಂಗೀಕಾರಗೊಂಡ ಈ ದಿನದಂದು ಸಂವಿಧಾನಶಿಲ್ಪಿ ಅಂಬೇಡ್ಕರರನ್ನು ಗೌರವದಿಂದ ನೆನೆಯುತ್ತೇನೆ ಎಂದಿದ್ದಲ್ಲದೇ, ನಾಡಿನ ಜನತೆಗೆ ಸಂವಿಧಾನ ದಿನಾಚರಣೆಯ ಶುಭಾಶಯ ಕೊರಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!