spot_img
Sunday, February 15, 2026
spot_img

ಶ್ರೀ ಶಾರದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೋಜಂ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ದೆಗೆ ಆಯ್ಕೆ.

ಜನಪ್ರತಿನಿಧಿ (ಮೈಸೂರು) : ಶ್ರೀ ಶಾರದ ಆಂಗ್ಲ ಮಾಧ್ಯಮ ಶಾಲೆ ಬಸ್ರೂರು ಇಲ್ಲಿನ ವಿದ್ಯಾರ್ಥಿ ಮೋಜಂ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು  ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಆಗಿದ್ದಾನೆ ಹಾಗೂ ಪೃಥ್ವಿರಾಜ್ ತೃತೀಯ ಸ್ಥಾನವನ್ನು ಪಡೆಯುವ ಮೂಲಕ ಶಾಲೆಗೆ ದೊಡ್ಡ ಗೌರವ ತಂದಿದ್ದಾರೆ. ಈ ಸಾಧನೆಯ ಮೂಲಕ ಮೋಜಂ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಯಶಸ್ಸು ಶಿಸ್ತು, ಪರಿಶ್ರಮ, ಮತ್ತು ಕ್ರೀಡಾ ತೀಕ್ಷ್ಣತೆಯ ಫಲಿತಾಂಶವಾಗಿದೆ. ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ಮತ್ತು ಸಹಪಾಠಿಗಳು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಶಾಲಾ ಸಂಚಾಲಕರಾದ ಸಂತೋಷ್ ಶೆಟ್ಟಿಯವರು, “ಇದು ನಮ್ಮ ಶಾಲೆಗೆ ಅಭಿಮಾನ ಮತ್ತು ಪ್ರೇರಣೆಯ ಕ್ಷಣ. ರಾಷ್ಟ್ರೀಯ ಮಟ್ಟದಲ್ಲಿ ಮೋಜಂ ನಮ್ಮ ಶಾಲೆಯ ಹೆಸರನ್ನು ಮತ್ತಷ್ಟು ಎತ್ತರಕ್ಕೆ ತಲುಪಿಸುತ್ತಾನೆ ಎಂಬ ವಿಶ್ವಾಸವಿದೆ,” ಎಂದು ಹೇಳಿದ್ದಾರೆ.

ಮೋಜಂ ಅವರ ಈ ಸಾಧನೆಯು ಇತರ ವಿದ್ಯಾರ್ಥಿಗಳಿಗೆ ಶ್ರೇಷ್ಠ ಮಾದರಿಯಾಗಿದೆ. ಅವರ ಮುಂದಿನ ಪ್ರಯತ್ನಗಳಿಗೆ ಶಾಲೆಯ ಎಲ್ಲಾ ಶಿಕ್ಷಕರು ಶುಭಾಶಯ ಕೋರಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!